ಕಾವೇರಿ ವಿವಾದ: ಜೂನ್ 30 ಕ್ಕೆ ಸರ್ವಪಕ್ಷ ಸಭೆ ಕರೆದ ಸಿಎಂ
- by Suddi Team
- June 27, 2018
- 379 Views
ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಹಿನ್ನಲೆಯಲ್ಲಿ ಕಾವೇರಿ ವಿವಾದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜೂನ್ 30 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ನಡೆಯಲಿರುವ ಸಭೆಯಲ್ಲಿ ವಿರೋಧಪಕ್ಷದ ನಾಯಕರು, ಸಂಸದರು, ಕಾವೇರಿ ಜಲಾನಯನ ಪ್ರದೇಶದ ಶಾಸಕರು ಭಾಗಿಯಾಗಲಿದ್ದು,
ರಾಜ್ಯಕ್ಕೆ ಆಗಿರುವ ಅನ್ಯಾಯ, ಮುಂದಿನ ನಡೆ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ.
ರಾಜ್ಯದ ಮನವಿ ಹೊರತಾಗಿಯೂ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಪ್ರತಿನಿಧಿಗಳನ್ನು ಕೇಂದ್ರ ಸರ್ಕಾರ ನೇಮಕ ಮಾಡಿದ್ದು,ರಾಜ್ಯವನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ,ಹೀಗಾಗಿ ರಾಜ್ಯದ ಮುಂದಿರುವ ಆಯ್ಕೆಗಳ ಕುರಿತು ಚರ್ಚೆ ನಡೆಯಲಿದೆ.
Related Articles
Thank you for your comment. It is awaiting moderation.


Comments (0)