ಮಾನಸ ಸರೋವರ ಯಾತ್ರಿಗಳ ರಕ್ಷಣೆಗೆ ಸಿಎಂ ಸೂಚನೆ
- by Suddi Team
- July 2, 2018
- 230 Views
ಬೆಂಗಳೂರು:ಮಾನಸ ಸರೋವರ ಯಾತ್ರೆ ಕೈಗೊಂಡು ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ 200ಕ್ಕೂ ಹೆಚ್ಚು ಯಾತ್ರಾರ್ಥಿಗಳ ರಕ್ಷಣೆ ಗೆ ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಿರ್ದೆಶನ ನೀಡಿದ್ದಾರೆ.
ಈ ಸಂಬಂಧ ಎಲ್ಲಾ ಅಗತ್ಯ ತುರ್ತು ಕ್ರಮ ಕೈಗೊಳ್ಳುವಂತೆ ದೆಹಲಿಯ ಕರ್ನಾಟಕ ಭವನದಲ್ಲಿರುವ ಸ್ಥಾನಿಕ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.ಸ್ಥಾನಿಕ ಆಯುಕ್ತರು ನೇಪಾಳ ಸರ್ಕಾರ ಭಾರತ ರಾಯಭಾರಿ ಕಛೇರಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು ಸೂಕ್ತ ರಕ್ಷಣೆ ವ್ಯವಸ್ಥೆ ಮಾಡಲು ತಿಳಿಸಿದ್ದಾರೆ.
ನೇಪಾಳದ ಭಾರತದ ರಾಯಭಾರಿ ಕಚೇರಿ ಅಧಿಕಾರಿಗಳು ನಮ್ಮ ಮನವಿಗೆ ತಕ್ಷಣ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ.
Related Articles
Thank you for your comment. It is awaiting moderation.


Comments (0)