- ಬೆಂಗಳೂರು
- ಮುಖ್ಯ ಮಾಹಿತಿ
- ರಾಜಕೀಯ
- ರಾಜ್ಯ
- Like this post: 0
ಸ್ಟಾಕ್ ಇರುವ ಸಕ್ಕರೆ ಮಾರಿಸಿಯಾದರೂ ರೈತರಿಗೆ ಬಾಕಿ ಹಣ ಪಾವತಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ
- by Suddi Team
- July 6, 2018
- 222 Views
ಬೆಂಗಳೂರು: ಸಕ್ಕರೆ ಸ್ಟಾಕ್ ಇದ್ದರೂ ಮಾರಲು ಆಗುತ್ತಿಲ್ಲ ಎಂದು ಕಾರ್ಖಾನೆ ಮಾಲೀಕರ ಹೇಳುತ್ತಿದ್ದಾರೆ. ಹಾಗಾಗಿ, ಕಾರ್ಖಾನೆ ಮಾಲೀಕರು ಮತ್ತು ರೈತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಸ್ಟಾಕ್ ಇಟ್ಟಿರುವ ಸಕ್ಕರೆಯನ್ನು ಮಾರಿಸಿಯಾದರೂ ರೈತರಿಗೆ ಹಣ ಪಾವತಿ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಕುಮಾರಸ್ವಾಮಿ ಸಭೆ ನಡೆಸಿದರು. ಸಭೆಯಲ್ಲಿ ಕಬ್ಬು ಬೆಳಗಾರರ ಬಾಕಿ ಪಾವತಿ, ಕಾರ್ಖಾನೆ ಮಾಲೀಕರ ಸಮಸ್ಯೆ, ಸಕ್ಕರೆ ಮಾರಾಟಕ್ಕೆ ಇರುವ ತೊಡಕುಗಳ ಕುರಿತು ಚರ್ಚೆ ನಡೆಸಲಾಯಿತು.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಸಕ್ಕರೆ ಕಾರ್ಖಾನೆ ಮಾಲೀಕರು ರೈತರಿಗೆ ನೀಡಬೇಕಾದ 1045 ಕೋಟಿ ರೂಪಾಯಿ ಹಣ ಬಾಕಿ ಉಳಿಸಿಕೊಂಡಿದ್ದಾರೆ. ಈ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಹಿಂದಿನ ಸಭೆಯಲ್ಲಿ ಸೂಚಿಸಿದ್ದೇನೆ. ಕೇಂದ್ರ ಸರ್ಕಾರದ ಕೆಲವು ನಿಯಮಗಳಿಂದಾಗಿ ಕಾರ್ಖಾನೆ ಮಾಲೀಕರು
ತಮ್ಮ ಬಳಿ ಇರುವ ಸಕ್ಕರೆ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸಭೆಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಕಾರ್ಖಾನೆ ಮಾಲೀಕರು ಹಾಗು ರೈತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಸ್ಟಾಕ್ ಇಟ್ಟಿರುವ ಸಕ್ಕರೆಯನ್ನು ಮಾರಿಸಿ ಆದರೂ ರೈತರಿಗೆ ಹಣ ಪಾವತಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
Related Articles
Thank you for your comment. It is awaiting moderation.
Comments (0)