ಬಯಲುಸೀಮೆಗೆ ನೀರು ಹರಿಸುವ ಮಹತ್ವಾಕಾಂಕ್ಷೆ ಯೋಜನೆ ಎತ್ತಿನಹೊಳೆಗೆ ಡಿಕೆಶಿ ಖುದ್ದು ಭೇಟಿ!

ಹಾಸನ: ಹಾಸನ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಸೇರಿದಂತೆ ಬಯಲು ಸೀಮೆಗೆ ನೀರನ್ನು ಹರಿಸುವ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆ ಪರಿಶೀಲನೆಗೆ ಇಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಖುದ್ದು ಭೇಟಿ ನೀಡಿದ್ದರು.

ಜಲ ಸಂಪನ್ಮೂಲ ಸಚಿವರಾಗಿರುವ ಡಿಕೆ ಶಿವಕುಮಾರ್ ಅವರು ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಖುದ್ದು ಹಾಸನದ ಎತ್ತಿನಹೊಳೆಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಸ್ಥಳಕ್ಕೆ ಭೇಟಿ ನೀಡುವ ಮುನ್ನ ಸಕಲೇಶಪುರದ ಖಾಸಗಿ ಹೋಟೆಲ್ನಲ್ಲಿ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡರು. ಬಳಿಕ ಇಷ್ಟು ದುಬಾರಿ ವೆಚ್ಚದಲ್ಲಿ ಯೋಜನೆ ನಡೆಯುತ್ತಿದ್ದು , ಕಾಲುವೆ ಮುಖಾಂತರ ಪಂಪ್ ಸೆಟ್ ಹಾಕಿ ಕೆಲವರು ನೀರನ್ನ ಕದಿಯುತ್ತಾರೆ ಅದ್ರ ಬಗ್ಗೆ ಎಚ್ಚರವಿರಬೇಕು ಜೊತೆಗೆ ನಿಮ್ಮ ಕೈಲಾಗದಿದ್ದರೆ ನಾನು ಪರ್ಯಾಯ ಮಾರ್ಗ ಹುಡುಕುತ್ತೇನೆಂದು ಅಧಿಕಾರಿಗಳಿಗೆ ಟಾಂಗ್ ಕೊಟ್ಟರು.

ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಡಿಕೆ ಶಿವಕುಮಾರ್ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಮಲೆನಾಡಲ್ಲಿ ವರ್ಷದಲ್ಲಿ ಆರು ತಿಂಗಳು ಮಳೆಯಾಗುತ್ತದೆ ಹೀಗಾಗಿ ನಿರ್ದಿಷ್ಟ ಸಮಯದಲ್ಲಿ ಕಾಮಗಾರಿ ಮುಗಿಸಲು ಸಾಧ್ಯವಾಗುವುದಿಲ್ಲ ಮುಂದಿನ ದಿನಗಳಲ್ಲಿ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಈಗಾಗಲೇ ಸೂಚನೆ ನೀಡಿದ್ದೇನೆ ಎಂದರು.

Related Articles

Comments (0)

Leave a Comment