ಮೈತ್ರಿ ಸರ್ಕಾರ ಮುಂದುವರೆಯುವುದು ಕೆಲ ಕಾಂಗ್ರೆಸ್ ನಾಯಕರಿಗೆ ಇಷ್ಟವಿಲ್ಲ: ಕೆ.ಬಿ.ಕೋಳಿವಾಡ
- by Suddi Team
- July 16, 2018
- 264 Views

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಣ್ಣೀರಿಗೆ ಕಾಂಗ್ರೆಸ್ ಮುಖಂಡರೇ ಕಾರಣವಾಗಿದ್ದು, ಕೆಲ ಕಾಂಗ್ರೆಸ್ ಮುಖಂಡರಿಗೆ ಸಮ್ಮಿಶ್ರ ಸರ್ಕಾರ ಮುಂದುವರೆಯೋದು ಬೇಕಿಲ್ಲ ಎಂದು ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಹೈಕಮಾಂಡ್ ತೀರ್ಮಾನದಂತೆ ಮೈತ್ರಿ ಸರ್ಕಾರ ರಚನೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಸೇರಿ ಕೆಲವರಿಗೆ ಮೈತ್ರಿ ಸರ್ಕಾರ ಮುಂದುವರೆಯೋದು ಬೇಕಿದೆ. ಆದ್ರೆ ಕೆಲ ನಾಯಕರಿಗೆ ಸರ್ಕಾರ ಮುಂದುವರೆಯೋದು ಬೇಕಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು.
ಜೆಡಿಎಸ್, ಕಾಂಗ್ರೆಸ್ ಹೊಂದಾಣಿಕೆಯಿಂದ ಮುಂದುವರೆದಿದ್ದೇ ಆದಲ್ಲಿ ಲೋಕಸಭೆ ಚುನಾವಣೆಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯ ಎಂದು ಕೋಳಿವಾಡ ಅಭಿಪ್ರಾಯ ಪಟ್ಟರು.
Related Articles
Thank you for your comment. It is awaiting moderation.
Comments (0)