ಉಡುಪಿಯ ಶಿರೂರು ಶ್ರೀ ವಿಧಿವಶ: ದೇವೇಗೌಡ ಸಂತಾಪ

ಉಡುಪಿ:ಶಿರೂರು ಮಠದ ಲಕ್ಷ್ಮೀವರ ತೀರ್ಥಶ್ರೀ ವಿಧಿ ವಶರಾಗಿದ್ದಾರೆ.ಕಳೆದ ಎರಡು ದಿನದಿಂದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳು‌ ಚಿಕಿತ್ಸೆ ಫಲಕಾರಿಯಾಗದೆ ಇಂದು‌ ಇಹಲೋಕ ತ್ಯೆಜಿಸಿದ್ರು.

ಆಹಾರ ವ್ಯತ್ಯಯದಿಂದಾಗಿ ಅನಾರೋಗ್ಯಕ್ಕೆ ಸಿಲುಕಿದ ಶ್ರೀಗಳನ್ನು ಉಡುಪಿ ಜಿಲ್ಲೆ ಮಣಿಪಾಲ ನಗರದಲ್ಲಿರುವ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ತೀವ್ರ ನಿಗಾ ಘಟಕದಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸ್ವಾಮಿಜಿ ವಿಧಿವಶರಾದ್ರು.

ಉಡುಪಿ ಶಿರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಸಂತಾಪ ಸೂಚಿಸಿದ್ರು.ಶ್ರೀಗಳ ಅಗಲಿಕೆ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ .ಸ್ವಾಮೀಜಿಗಳ ಅಗಲಿಕೆಯಿಂದ ಇಡೀ ಭಕ್ತ ಸಮೂಹಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ.ಶ್ರೀ ಗಳು ನಮಗೆಲ್ಲ ಮಾರ್ಗದರ್ಶಕರಾಗಿದ್ದರು.ಶಿರೂರು ಶ್ರೀಗಳು ಅತ್ಯಂತ ಕಿರಿಯ ವಯಸ್ಸಿನಲ್ಲೇ ಸನ್ಯಾಸತ್ವವನ್ನು ತೆಗೆದುಕೊಂಡವರು.ಶ್ರೀಗಳಿಗೆ ಸಾಹಿತ್ಯ ಮತ್ತು ಸಂಗೀತದ ಬಗ್ಗೆ ಬಹಳ ಆಸಕ್ತಿ ಇತ್ತು.ಸಮಾಜವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವಲ್ಲಿ ಶ್ರೀಗಳು ಮಾರ್ಗದರ್ಶಕರಾಗಿದ್ದರು.ಭಗವಂತ ಇಡಿ ಭಕ್ತ ಸಮೂಹಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಸಂತಾಪ ಸಂದೇಶದ ಮೂಲಕ ಕೋರಿದ್ರು.

Related Articles

Comments (0)

Leave a Comment