ನನ್ನ ಮತ್ತು ಹೈ ಕಮಾಂಡ್ ಜತೆ ಭಿನ್ನಾಭಿಪ್ರಾಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

 

 

ಬೆಂಗಳೂರು:ನನ್ನ ಹಾಗೂ ಹೈಕಮಾಂಡ್ ಮಧ್ಯೆ ಭಿನ್ನಾಭಿಪ್ರಾಯ ಇದೆ ಅಂತ ಬಿಂಬಿಸಲು ನನ್ನ ಹೆಸರು ಮಧ್ಯೆ ತರಲಾಗಿದ್ದು, ಇದೆಲ್ಲಾ ಊಹಾಪೋಹ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕುಮಾರಸ್ವಾಮಿಯವರು ಐದು ವರ್ಷ ಸಿಎಂ ಎಂದು ಹೈಕಮಾಂಡ್ ತೀರ್ಮಾನಿಸಿದೆ. ಹೈಕಮಾಂಡ್ ತೀರ್ಮಾನವನ್ನು ಎಲ್ಲರೂ ಒಪ್ಪಿಕೊಂಡಿದ್ದೇವೆ. ಹೈಕಮಾಂಡ್ ತೀರ್ಮಾನವನ್ನು ಕೆ.ಸಿ.ವೇಣುಗೋಪಾಲ್ ಪ್ರಕಟ ಮಾಡಿದ್ದಾರೆ. ಒಂದು ತಂಡವಾಗಿ ನಾವೆಲ್ಲ ಹೈಕಮಾಂಡ್ ತೀರ್ಮಾನ ಒಪ್ಪಿಕೊಂಡಿದ್ದೇವೆ ಎಂದು ತಿಳಿಸಿದರು.

ಕೆ‌‌‌‌‌.ಸಿ.ವೇಣುಗೋಪಾಲ್ ಹಾಗು ನನ್ನ ನಡುವೆ ಅಸಮಧಾನ ಇದೆ ಅನ್ನೋದು ಊಹಾಪೋಹವಾಗಿದೆ. ನಾನು ಜೆಡಿಎಸ್ ಜತೆ ಐದು ವರ್ಷ ಬೆಂಬಲದ ಬಗ್ಗೆ ಅವರ ಬಳಿ ಚರ್ಚೆ ಮಾಡಿಲ್ಲ. ಕಾಂಗ್ರೆಸ್ ಹೈ ಕಮಾಂಡ್ ತೆಗದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ. ನಾನು ಯಾವ ವಿಚಾರವೂ ಮಾತನಾಡಿಲ್ಲ. ಕೆ.ಸಿ.ವೇಣುಗೋಪಾಲ್ ಜೊತೆಯೂ ಚರ್ಚೆ ನಡೆಸಿಲ್ಲ. ಪಕ್ಷದ ಸಭೆಗೂ ನಾನು ಹೋಗಲಿಲ್ಲ. ಆದರೂ ನನ್ನ ಹೆಸರು ಸುಮ್ ಸುಮ್ಮನೆ ಮಧ್ಯೆ ಎಳೆದು ತಂದಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನು ಸಚಿವ ಸಂಪುಟದಲ್ಲಿ ಈ ಬಾರಿ ಹಿರಿಯರಿಗೆ ಕೊಕ್ ವಿಚಾರ ನೀಡುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹೈ ಕಮಾಂಡ್ ಯಾರಿಗೆ ಸ್ಥಾನ ನೀಡಬೇಕು ಅನ್ನುವ ಬಗ್ಗೆ ನಿರ್ಧಾರ ತೆಗದುಕೊಳ್ಳಲಿದೆ ಎಂದು ಇದೇ ವೇಳೆ ವಿವರಿಸಿದರು.

ಅಸಮಾಧಾನ ಇದ್ದರೆ ಬಗೆಹರಿಸುತ್ತೇವೆ:
ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್.ಪಾಟೀಲ್ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಖರ್ಗೆ, ಎಸ್.ಆರ್. ಪಾಟೀಲ್ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅವರು ಕಾರ್ಯಾಧ್ಯಕ್ಷ ಸ್ಥಾನಕ್ಕೆ
ಯಾವ ಕಾರಣಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಗೊತ್ತಿಲ್ಲ. ರಾಜೀನಾಮೆ ಪತ್ರದಲ್ಲಿ ಏನೀದೆ ಎಂದು ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತೇನೆ. ಅವರಿಗೆ ಅಸಮಾಧಾನ ಆಗಿದ್ದರೆ, ಕುಳಿತು ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

Related Articles

Comments (0)

Leave a Comment