ಕೆರೆ ಅಭಿವೃದ್ಧಿ: ಸಮಗ್ರ ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯದ ಕೆರೆಗಳನ್ನು ಸಂರಕ್ಷಿಸಿ ಅಭಿವೃದ್ಧಿ ಪಡಿಸುವ ಕುರಿತು ಸಮಗ್ರ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯ ಕೆರೆ ಸಂರಕ್ಷಣೆ ಹಾಗೂ ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರ್ವಹಣೆ ಕುರಿತು ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಗಳು ಈ ಸೂಚನೆ ನೀಡಿದರು.

ರಾಜ್ಯದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದ ಕೆರೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ಖುದ್ದು ಆಸಕ್ತಿ ವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಹೂಳೆತ್ತುವ ಹೆಸರಲ್ಲಿ ಅನುದಾನ ದುರುಪಯೋಗ ಆಗಬಾರದು. ಕೆರೆಗಳ ಸಂಗ್ರಹಣಾ ಸಾಮರ್ಥ್ಯ ಹೆಚ್ಚಳವಾಗಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಣ್ಣ ನೀರಾವರಿ ಸಚಿವ ಇಲಾಖೆಯನ್ನು ಬಲಪಡಿಸಿ ಕೆರೆಗಳ ನಿರ್ವಹಣೆಗೆ ಆದ್ಯತೆ ನೀಡಬೇಕಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಸಭೆಯಲ್ಲಿ ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಅರಣ್ಯ ಸಚಿವ ಶಂಕರ್ ಮೊದಲಾದವರು ಉಪಸ್ಥಿತರಿದ್ದರು.

Related Articles

Comments (0)

Leave a Comment