ಬೆಂಗಳೂರಿನಲ್ಲೇ ಏರ್ ಶೋ ನಡೆಸಿ: ಪ್ರಧಾನಮಂತ್ರಿಗಳಿಗೆ ಸಿಎಂ ಪತ್ರ!
- by Suddi Team
- August 13, 2018
- 82 Views

ಬೆಂಗಳೂರು: ಏರೋ ಇಂಡಿಯಾ ಶೋ ಉತ್ತರ ಪ್ರದೇಶಕ್ಕೆ ಸ್ಥಳಾಂತರಗೊಳ್ಳಿಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನ ಮಂತ್ರಿ ನರೇಂದ್ರ ಅವರಿಗೆ ಪತ್ರ ಬರೆದಿದ್ದು ಬೆಂಗಳೂರಿನಲ್ಲೇ ಏರ್ ಶೋ ನಡೆಸುವಂತೆ ಮನವಿ ಮಾಡಿದ್ದಾರೆ.
2017 ರಲ್ಲಿ ನಡೆದ ಏರ್ ಶೋ ಸೇರಿದಂತೆ ಈವರೆಗೆ ನಡೆದಿರುವ ಏರ್ ಶೋ ಗಳಲ್ಲಿ ಉತ್ತಮ ಮೂಲ ಸೌಕರ್ಯಗಳನ್ನು ಒದಗಿಸಿದ್ದೇವೆ. ಅಲ್ಲದೆ, ಏರ್ ಶೋ ಗೆ ಬೆಂಗಳೂರಿನಲ್ಲಿ ಉತ್ತಮ ವಾತಾವರಣ ಸಹ ಇದೆ ಎಂದು ಪತ್ರದಲ್ಲಿ ಪ್ರಧಾನಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
2019 ರಲ್ಲಿ ನಡೆಯಲಿರುವ ಏರ್ ಶೋವನ್ನು ಕೂಡ ಬೆಂಗಳೂರಿನಲ್ಲೇ ನಡೆಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಹಾಗೂ ಈ ಕುರಿತು ತ್ವರಿತವಾಗಿ ಕೇಂದ್ರ ಸರ್ಕಾರ ಗಮನಹರಿಸಬೇಕೆಂದು ಮನವಿ ಮಾಡಿದ್ದಾರೆ.
Related Articles
Thank you for your comment. It is awaiting moderation.
Comments (0)