ರೈತರೇ ಆತ್ಮಹತ್ಯೆಗೆ ಶರಣಾಗಬೇಡಿ,ನಿಮ್ಮೊಂದಿಗೆ ನಾವಿದ್ದೇವೆ: ಸಿಎಂ
- by Suddi Team
- August 15, 2018
- 629 Views

ಬೆಂಗಳೂರು: ರೈತರೇ ದಯಮಾಡಿ ಆತ್ಮಹತ್ಯೆಗೆ ಶರಣಾಗಬೇಡಿ. ನಿಮ್ಮೊಂದಿಗೆ ನಾವಿದ್ದೇವೆ. ಸರಕಾರವಿದೆ ಎಂದು ಸಾಲಮನ್ನಾ ಆಗಲಿದೆ ಇದರಲ್ಲಿ ಯಾವುದೇ ಅಪನಂಬಿಕೆ ಬೇಡ ಸಿಎಂ ಎಚ್.ಡಿ ಕುಮಾರಸ್ವಾಮಿ ರೈತರಲ್ಲಿ ಮನವಿ ಮಾಡಿದ್ದಾರೆ.
72 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಚರಿಸಲಾಯಿತು.ಬೆಳಿಗ್ಗೆ 9 ಗಂಟೆಗೆ ಸಿಎಂ ಕುಮಾರಸ್ವಾಮಿ ಧ್ವಜಾರಹಣ ನೆರವೇರಿಸುವ ಮೂಲಕ ಸ್ವಾತಂತ್ರ್ಯೋತ್ಸವಕ್ಕೆ ಚಾಲನೆ ನೀಡಿದ್ರು.ಬಿಳಿ ಪಂಚೆ, ಬಿಳಿ ಶರ್ಟ್ ತೊಟ್ಟು ಬಂದ ಸಿಎಂ ಸಿಎಂ ಗೆ ಅನಿತಾ ಕುಮಾರಸ್ವಾಮಿ ಸಾಥ್ ನೀಡಿದ್ರು.ತೆರೆದ ವಾಹನದ ಮೂಲಕ ಪರೇಡ್ ವೀಕ್ಷಣೆ ಮಾಡಿ ಗೌರವ ಸ್ವೀಕಾರ ಮಾಡಿ ತುಕಡಿಗಳ ವೀಕ್ಷಣೆ ಮಾಡಿದ್ರು.
ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ವಿವಿಧ ಶಾಲೆಗಳ ಒಟ್ಟು 2 ಸಾವಿರ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿದರು.ಗೋವಾ ಪೊಲೀಸರು,ಸೇವಾ ದಳ, ಎನ್.ಸಿ.ಸಿ, ಇತರರಿಂದ ಪಥಸಂಚಲನ ನಡೆಸಿತು.ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ನಿಂದ ಜಿಮ್ನಾಸ್ಟಿಕ್ಸ್, ಮಿಲಟರಿ ಎಸಿ ಸೆಂಟರ್ ತಂಡದಿಂದ ಮೊಟರ್ ಸೈಕಲ್ ಪ್ರದರ್ಶನ ಮೂಡಿ ಬಂತು.
ನಂತರ ಭಾಷಣ ಮಾಡಿದ ಸಿಎಂ,ರೈತರ ಬದುಕು ಹಸನು ಮಾಡಲು ನನ್ನ ಹೊಸ ಚಿಂತನೆಯೇ ಈ ರೈತ ಸ್ಪಂದನ.ಎರಡನೆ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇಂದು 85ನೇ ದಿನ. ಈ 85 ದಿನಗಳಲ್ಲಿ ನನ್ನ ಬಹುತೇಕ ಚಿಂತನೆ ರೈತರ ಚಿತ್ತದತ್ತ ಇವೆ. ರೈತರನ್ನು ಚಿಂತೆಯಿಂದ ಮುಕ್ತಗೊಳಿಸಬೇಕೆಂದು ಶತಪ್ರಯತ್ನಪಟ್ಟಿದ್ದೇನೆ. ನಿಮ್ಮೊಂದಿಗೆ ನಾನಿದ್ದೇನೆ. ರೈತರ ಆತ್ಮಹತ್ಯೆಯ ಸುದ್ದಿ ಕಿವಿಗೆ ಪ್ರತಿಬಾರಿ ಬಿದ್ದಾಗಲೂ ನನ್ನ ಕುಟುಂಬದ ಸದಸ್ಯರನ್ನೇ
ಕಳೆದುಕೊಂಡಂತೆ ದುಃಖ ಅನುಭವಿಸಿದ್ದೇನೆ.ರಾಜ್ಯದಲ್ಲಿ ಈ ಬಾರಿ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ಇದು ಸಂತೋಷದ ವಿಷಯವಾದರೂ 13 ಜಿಲ್ಲೆಗಳಲ್ಲಿ ಮಳೆಯ ಕೊರತೆ ಇದೆ. ಋತುಮಾನಕ್ಕೆ, ಹವಾಮಾನಕ್ಕೆ ಅನುಗುಣವಾಗಿ ರೈತರು ಕೃಷಿ ಚಟುವಟಿಕೆ ನಡೆಸಲು ಕಂದಾಯ ಹಾಗೂ ಕೃಷಿಇಲಾಖೆಗಳು ಸೂಕ್ತ ಮಾರ್ಗದರ್ಶನ ನೀಡಲಿವೆ ಎಂದರು.
ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಸಹಕಾರಿ ವಲಯದ ಸಾಲ ಮನ್ನಾ ಮಾಡಲು ಆದೇಶಿಸಲಾಗಿದೆ. 20 ಲಕ್ಷ 38 ಸಾವಿರ ರೈತರು ಇದರ ಲಾಭ ಪಡೆಯಲಿದ್ದಾರೆ. ವಾಣಿಜ್ಯ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಮಾಡಲು ಸಹ ಸಧ್ಯದಲ್ಲಿಯೇ ಸರಕಾರಿ ಆದೇಶ ಹೊರಡಿಸಲಾಗುವುದು. ಸಾಲಮನ್ನಾ
ಕುರಿತಂತೆ ಸಂದೇಹಗಳನ್ನು ಹುಟ್ಟುಹಾಕಲಾಗುತ್ತಿದೆ. ಈ ಕುರಿತು ಅಪನಂಬಿಕೆ ಬೇಡ. ರಾಜಕೀಯ ಇಚ್ಛಾಶಕ್ತಿಯ ಮೂಲಕ ನಮ್ಮ ಮೈತ್ರಿ ಸರ್ಕಾರ ರೈತರ ಹೆಗಲಿಗೆ ಹೆಗಲು ಕೊಡುತ್ತದೆ. ಅತ್ಯಂತ ಪಾರದರ್ಶಕವಾಗಿ, ರೈತರ ಸಾಲ ಮನ್ನಾ ಮಾಡಲು ಕ್ರಮ ವಹಿಸಲಾಗಿದೆ. ರೈತರ ವಿಚಾರದಲ್ಲಿ ರಾಜಕೀಯ
ಮಾಡುವುದು ಆರೋಗ್ಯಕರವಲ್ಲ ಎಂದು ರಾಜಕೀಯ ಪಕ್ಷಗಳಿಗೆ ಮನವಿ ಸಿಎಂ ಮನವಿ ಮಾಡಿದರು.
ಸಾಲ ಮನ್ನಾ ಕ್ರಮವೊಂದೇ ರೈತರ ಸಮಸ್ಯೆಗಳಿಗೆ ಪರಿಹಾರವಲ್ಲ. ಇದು ಅವರಲ್ಲಿ ಆತ್ಮವಿಶ್ವಾಸ ತುಂಬುವ ಒಂದು ಪ್ರಯತ್ನ ಮಾತ್ರ. ಕೃಷಿ ವಲಯವನ್ನು ಸುಸ್ಥಿರಗೊಳಿಸಲು, ಲಾಭದಾಯಕವನ್ನಾಗಿಸಲು ಏನೇನು ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಖ್ಯಾತ ಕೃಷಿ ತಜ್ಞ ಡಾ. ಎಂ.ಎಸ್. ಸ್ವಾಮಿನಾಥನ್ ಹಾಗೂ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿಯಲ್ಲಿ ತೊಡಗಿಕೊಂಡಿರುವ ತಜ್ಞರ ಸಲಹೆ, ಮಾರ್ಗದರ್ಶನವನ್ನೂ ಪಡೆಯಲಾಗುತ್ತಿದೆ. ನೀರಿನ ಸದ್ಬಳಕೆಗೆ ಇಸ್ರೇಲ್ ಮಾದರಿ ನೀರಾವರಿ ಯೋಜನೆಯನ್ನು
ಹಂತ ಹಂತವಾಗಿ ಜಾರಿಗೊಳಿಸಲಾಗುತ್ತಿದೆ. ಕೃಷಿಯ ವೆಚ್ಚ ಕಡಿತಗೊಳಿಸಿ, ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುವುದು. ಇದಕ್ಕೆ ಹಲವು ಖಾಸಗಿ
ಸಂಸ್ಥೆಗಳು ಸಹಕಾರ ನೀಡಲು ಮುಂದೆ ಬಂದಿರುವುದು ಆಶಾದಾಯಕ ಬೆಳವಣಿಗೆ. ರಾಜ್ಯದ ಕೃಷಿ ವಲಯದಲ್ಲಿ ಸುಸ್ಥಿರತೆ ತರಲು ಎಲ್ಲರ ಸಹಕಾರ ಅತಿ ಮುಖ್ಯ. ರೈತರಲ್ಲಿ ಉತ್ತೇಜನ ತುಂಬಿ ಆಧುನಿಕ ಕೃಷಿ ಪದ್ಧತಿಯ ಬಗ್ಗೆ ಮಾರ್ಗದರ್ಶನ ನೀಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ವಿವರಿಸಿದರು.
Related Articles
Thank you for your comment. It is awaiting moderation.
Comments (0)