ಕೊಡಗಿನಲ್ಲಿ ನಾಳೆಯೂ ಮುಖ್ಯಮಂತ್ರಿಗಳ ಪ್ರವಾಸ!
- by Suddi Team
- August 18, 2018
- 306 Views
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆಯ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಪ್ರವಾಸ ರದ್ದು ಪಡಿಸಿದ್ದು, ಕೊಡಗು ಜಿಲ್ಲೆಯಲ್ಲಿ ಪ್ರವಾಸ ಮುಂದುವರೆಸಲಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ರಸ್ತೆ ಮೂಲಕ ಮಡಿಕೇರಿಗೆ ತೆರಳಿದ ಮುಖ್ಯಮಂತ್ರಿಗಳು ಅಲ್ಲಿನ ಗಂಜಿಕೇಂದ್ರವೊಂದಕ್ಕೆ ತೆರಳಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು.
ನಂತರ ಮಡಿಕೇರಿ ನಗರದಲ್ಲಿ ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದರು.
ಮಡಿಕೇರಿ ಬಳಿ ಭೂಕುಸಿತದಿಂದ ಸಿಲುಕಿಕೊಂಡಿರುವ ಸುಮಾರು 60 ಜನರನ್ನು ರಕ್ಷಿಸಲು ಮುಖ್ಯಮಂತ್ರಿ ಗಳು ಪ್ರಯಾಣಿಸಿದ ಹೆಲಿಕಾಪ್ಟರ್ ಬಳಸುವ ಉದ್ದೇಶದಿಂದ ಹಾಗೂ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳು ಇಂದು ರಾತ್ರಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿ, ನಾಳೆಯೂ ಕೊಡಗು ಜಿಲ್ಲೆಯಲ್ಲಿ ಪ್ರವಾಸ ಮುಂದುವರೆಸಲಿದ್ದಾರೆ ಎಂದು ಸಿಎಂ ಕಛೇರಿ ಪ್ರಕಟಣೆ ತಿಳಿಸಿದೆ.
Related Articles
Thank you for your comment. It is awaiting moderation.


Comments (0)