ಸಿದ್ಧು ಹಾಗೂ ನನ್ನ ಫೋನ್ ಕದ್ದಾಲಿಕೆ ನಡೆಯುತ್ತದೆ: ಹೊಸ ಬಾಂಬ್ ಸಿಡಿಸಿದ ಬಿಎಸ್ವೈ
- by Suddi Team
- August 29, 2018
- 256 Views

ಬೆಂಗಳೂರು: ನನ್ನನ್ನು ಸೇರಿದಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಹಲವು ಮುಖಂಡರ ಫೋನ್ ಕದ್ದಾಲಿಕೆ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ನನ್ನ ಫೋನ್ ಸೇರಿದಂತೆ ಬಹಳಷ್ಟು ಮುಖಂಡರ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ. ಈ ಹಿಂದೆಯೇ ಇದರ ಬಗ್ಗೆ ಪ್ರಸ್ತಾಪಿಸಿದ್ದರೂ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ, ಕೂಡಲೇ ಸರ್ಕಾರ ಇದನ್ನು ನಿಲ್ಲಿಸಬೇಕು ಫೋನ್ ಕದ್ದಾಲಿಕೆ ಸಂಬಂಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಫೋನ್ ಕದ್ದಾಲಿಕೆ ಕುರಿತು ಸರಿಯಾದ ರೀತಿಯಲ್ಲಿ ತನಿಖೆಯಾಗದೆ ಇದ್ದರೆ ಈ ಹಿಂದೆ ಫೋನ್ ಕದ್ದಾಲಿಕೆಯಿಂದ ಆದ ಘಟನೆ ಮರುಕಳಿಸಲಿದೆ ಎಂದು ಹೇಳುವ ಮೂಲಕ ರಾಮಕೃಷ್ಣ ಹೆಗಡೆ ಸರ್ಕಾರ ಪತನಗೊಂಡ ಪರಿಸ್ಥಿತಿ ಕುಮಾರಸ್ವಾಮಿ ಸರ್ಕಾರಕ್ಕೆ ಬರಲಿದೆ ಎನ್ನುವ ಎಚ್ಚರಿಕೆ ನೀಡಿದರು.
ಇದೇ ವೇಳೆ ಮಾತನಾಡಿದ ಬಿಎಸ್ವೈ, ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಬಿಜೆಪಿ ಕೈಹಾಕಲ್ಲ ಆದರೆ ಅವರಾಗಿಯೇ ಕಚ್ಚಾಡಿಕೊಂಡು ಸರ್ಕಾರ ಕುಸಿದರೆ ಅದಕ್ಕೆ ಬಿಜೆಪಿ ಜವಾಬ್ದಾರಿ ಅಲ್ಲ ಎಂದರು.
Related Articles
Thank you for your comment. It is awaiting moderation.
Comments (0)