ಸಚಿವ ಸ್ಥಾನಕ್ಕೆ ಎಸ್ ಮಹೇಶ್ ಗುಡ್ ಬೈ!

ಬೆಂಗಳೂರು:ರಾಜ್ಯದಲ್ಲಿ ಲೋಕಸಭೆ ಹಾಗು ವಿಧಾನಸಭೆಗಳ ಉಪಚುನಾವಣೆ ವೇಳೆ ಮೈತ್ರಿ ಸರ್ಕಾರಕ್ಕೆ ಬಿ.ಎಸ್.ಪಿ ಶಾಕ್ ನೀಡಿದೆ.ಮಹತ್ವದ ರಾಜಕೀಯ ಬೆಳವಣಿಗೆಗಳಲ್ಲಿ ಸಚಿವ ಸ್ಥಾನಕ್ಕೆ ಎಸ್.ಮಹೇಶ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಬಿಎಸ್ಪಿ ಅಧಿನಾಯಕಿ ಮಾಯಾವತಿ ಸೂಚನೆ ಮೇರೆಗೆ ಸರ್ಕಾರದಿಂದ ಹೊರಬಂದಿರುವ ಮಹೇಶ್ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರುಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದು,ಮೈತ್ರಿ ಸರ್ಕಾರಕ್ಕೆ ಬೆಂಬಲ ಮುಂದುವರೆಸುವ ಘೋಷಣೆ ಮಾಡಿದ್ದಾರೆ.

ರಾಜೀನಾಮೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮಹೇಶ್,ಸಚಿವರಾಗಿ 4 ತಿಂಗಳು ಕೆಲಸ ಮಾಡಿದ್ದೇನೆ. ಪಕ್ಷದ ಕೆಲಸ ಮಾಡಲು ನನಗೆ ಆಗ್ತಿಲ್ಲ.
ನನ್ನ ವರಿಷ್ಠೆ ಮಾಯಾವತಿ ರಾಜ್ಯಾಧ್ಯಕರಿಂದ ಸಚಿವರಾಗಿ ಆಯ್ಕೆ ಮಾಡಿದ್ರು.ಸಚಿವರಾದ ಮೇಲೆ ಕ್ಷೇತ್ರದಲ್ಲಿ ಕೆಲಸ ಮಾಡ್ತಿಲ್ಲ.ಲೋಕಸಭೆ ಚುನಾವಣೆ ಪಕ್ಷ ಬಲವರ್ಧನೆಗಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ,ಸಚಿವ ಸ್ಥಾನಕ್ಕೆ ಮಾತ್ರ ರಾಜೀನಾಮೆ ಕೊಡ್ತಿದ್ದೇನೆ.ಜೆಡಿಎಸ್ ಗೆ ನಮ್ಮ ಬೆಂಬಲ ಇರುತ್ತೆ.ಉಪ‌ ಚುನಾವಣೆಯಲ್ಲಿ ಜೆಡಿಎಸ್ ಗೆ ಬೆಂಬಲ ಕೊಡ್ತೀವಿ ಅಂದ್ರು.

ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕಾಗಿದೆ ಹಾಗಾಗಿ ರಾಜೀನಾಮೆ ನೀಡಿದ್ದೇನೆ ನನ್ನ ಇಲಾಖೆಯಲ್ಲಿ ವೈಫಲ್ಯನಾಗಿದ್ದೇನೆ ಅನ್ನೋದು ಸರಿಯಲ್ಲ ಮುಂದೆ ಬರುವವರಿಗೂ ಇಲಾಖೆ ಏನು ಅನ್ನೋದು ಗೊತ್ತಾಗುತ್ತೆ.ನಾಲ್ಕು ತಿಂಗಳ ಅವಧಿಯಲ್ಲಿ ಪಕ್ಷದ ಚಟುವಟಿಕೆಗಳನ್ನ ಮಾಡಲು ಸಾಧ್ಯವಾಗಲಿಲ್ಲ ಸಚಿವ ಸ್ಥಾನ ವಹಿಸಿಕೊಂಡ ಬಳಿಕ ನಿರೀಕ್ಷಿತ ಮಟ್ಟದಲ್ಲಿ ಪಕ್ಷದ ಕೆಲಸ ಮಾಡಲು ಸಾಧ್ಯವಾಗಲಿಲ್ಲ
೨೦ ವರ್ಷಗಳ ಸತತ ಪರಿಶ್ರಮದಿಂದ ಗೆದ್ದಿದ್ದೇನೆ ಖಾತೆಯನ್ನ ಅರ್ಥ ಮಾಡಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಂಡಿತು
ಜನರು ನನ್ನ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ ಕೆಲವರು ಗೆದ್ದು ಬೆಂಗಳೂರಿಗೆ ಹೋದರು ಅಲ್ಲೇ ಇದ್ದಾರೆ ಎನ್ನುತ್ತಿದ್ದಾರೆ
ನನ್ನ ಕ್ಷೇತ್ರದ ಕಡೆಯೂ ನಾನು ಗಮನ ಕೊಡಬೇಕಾಗಿದೆ
ನಾನು ನನ್ನ ಮಂತ್ರಿ ಪದವಿಗೆ ರಾಜೀನಾಮೆ ಕೊಟ್ಟಿದ್ದೇನೆ ಮಾಯಾವತಿ ಅವರೂ ರಾಜೀನಾಮೆ ನೀಡುವಂತೆ ಹೇಳಿಲ್ಲ
ಆದರೂ ನಾನೇ ವೈಯಕ್ತಿಕವಾಗಿ ರಾಜೀನಾಮೆ ನೀಡಿದ್ದೇನೆ ಎಂದ್ರು.

Related Articles

Comments (0)

Leave a Comment