ಮುಖ್ಯಮಂತ್ರಿಗಳಿಂದ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ರಾಜಸ್ವ ಸಂಗ್ರಹಣೆಯಲ್ಲಿ 131 ಕೋಟಿ ರೂ. ಹೆಚ್ಚಳವಾಗಿದ್ದು , ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಪ್ರಯಾಣಿಕರ ಆಶಯಗಳನ್ನು ಅರ್ಥೈಸಿಕೊಂಡು ಕಾರ್ಯನಿರ್ವಹಿಸಬೇಕೆಂದು ಮುಖ್ಯಮಂತ್ರಿಯವರು ಸೂಚಿಸಿದರು.

ಪ್ರಯಾಣಕರಿಗೆ ಬಸ್ ಸೌಲಭ್ಯ ಮಾತ್ರವಲ್ಲದೆ ಅವರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ವಿಸ್ತರಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಪ್ರಯಾಣಿಕರಿಗೆ ಹೊರೆಯಾಗದಂತೆ ಇಲಾಖೆಯ ನಷ್ಟವನ್ನು ಸರಿದೂಗಿಸಲು ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.

ಮೆಟ್ರೋ ರೈಲಿನೊಂದಿಗೆ ಸಮನ್ವಯ ಸಾಧಿಸುವತ್ತ ಗಮನ ಹರಿಸಬೇಕು. ಬಸ್ ದರ ಹೆಚ್ಚಿಸುವ ಬಗ್ಗೆ ಸಾರ್ವಜನಿಕ ಅಭಿಪ್ರಾಯವನ್ನು ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಯವರು ತಿಳಿಸಿದರು. ಬಸ್ ದರ ಹೆಚ್ಚಿಸದೇ ನಷ್ಟವನ್ನು ಸರಿದೂಗಿಸಲು ಪರ್ಯಾಯ ಮಾರ್ಗವನ್ನು ಕಂಡುಕೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|| ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ|| ಇ.ವಿ.ರಮಣರೆಡ್ಡಿ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಬಸವರಾಜು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

Related Articles

Comments (0)

Leave a Comment