ಮೇಕೆದಾಟು ಯೋಜನೆಗೆ ತಮಿಳುನಾಡು,ಕೇಂದ್ರ ಸರ್ಕಾರದ ತಕರಾರು ಸಲ್ಲದು; ಸಿಎಂ ಸಿದ್ದರಾಮಯ್ಯ
- September 13, 2025
- 0 Likes
ಬೆಂಗಳೂರು: ಕಳೆದ ಮೂರು ವರ್ಷದಿಂದ ಸರ್ಕಾರದ ವತಿಯಿಂದ ಆಚರಿಸ್ತಿರೋ ಟಿಪ್ಪು ಜಯಂತಿಯನ್ನು ಈ ಬಾರಿಯೂ ಆಚರಿಸಲು ರಾಜ್ಯ ಸರ್ಕಾರ ತಯಾರಿ ನಡೆಸ್ತಿದೆ. ನಾಳೆ ನಡೆಯುವ ಕಾರ್ಯಕ್ರಮಕ್ಕೆ ವಿಧಾನಸೌಧದಲ್ಲಿ ಸಕಲ ಸಿದ್ದತೆಗಳೂ ನಡೀತಿದ್ರೆ ಮತ್ತೊಂದು ಕಡೆ ಬಿಜೆಪಿ ಪ್ರತಿಭಟನೆ ಮಾಡ್ತಿದೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರಂಭಿಸಿದ ಟಿಪ್ಪು ಜಯಂತಿ ವಿವಾದಗಳಿಂದಲೇ ಸದ್ದು ಮಾಡ್ತಿದೆ. ನಾಳೆ ನಡೆಯುವ ಟಿಪ್ಪು ಜಯಂತಿಗೆ ಈಗಾಗಲೇ ಆಹ್ವಾನ ಪತ್ರಿಕೆ ಸಿದ್ಧವಾಗಿದ್ದು ಸ್ಥಳ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಎಂದು ತೀರ್ಮಾನಿಸಲಾಗಿದೆ. ಜೊತೆಗೆ ಅದರಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೆಸರೇ ನಾಪತ್ತೆಯಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ದಿನೇಶ್ ಗುಂಡೂರಾವ್ ಅವರು ಮುಖ್ಯಮಂತ್ರಿಗಳೇ ವಿಶ್ರಾಂತಿಗೆ ತೆರಳುವುದರಿಂದ ಹೆಸರು ಹಾಕದಂತೆ ಸೂಚಿಸಿದ್ದರು ಎಂದು ಸಮರ್ಥನೆ ನೀಡಿದ್ದಾರೆ.
ಟಿಪ್ಪು ಜಯಂತಿಯಿಂದ ದೂರ ಉಳಿಯಲೆಂದೆ ಸಿಎಂ ಕುಮಾರಸ್ವಾಮಿ ವಿಶ್ರಾಂತಿಗೆ ತೆರಳಿದ್ದಾರೆಯೇ ಎಂಬ ಪ್ರಶ್ನೆಗಳು ಸಹ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
Comments (0)