ಅಂಬಿ ನಿಧನ: ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ
- by Suddi Team
- November 25, 2018
- 65 Views

ಬೆಂಗಳೂರು:ಇಹಲೋಕ ತ್ಯಜಿಸಿರುವ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಕಾಲ ಶೋಕಾಚರಣೆಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ವಿಕ್ರಂ ಆಸ್ಪತ್ರೆಯಲ್ಲಿ ಸುಧೀರ್ಘ ಸಮಯ ಇದ್ದು ಅಂಬರೀಶ್ ನಿಧನದ ನಂತರದ ಬೆಳವಣಿಗೆಗಳನ್ನು ಖುದ್ದು ಪರಿಶೀಲಿಸಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಂತರ ಸುದ್ದಿಗಾರರೊಂದಿಗೆ ಮಾಡನಾಡಿದರು.
ನಾಳೆ ಬೆಳಗ್ಗೆ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗುವುದು. ಅಂಬರೀಶ್ ಅವರ ಸ್ಮರ್ಣಾರ್ಥ ಸ್ಮರಕವನ್ನು ನಿರ್ಮಿಸಬೇಕಿರುವುದರಿಂದ ಬೆಂಗಳೂರಿನಲ್ಲೆ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಹೇಳಿದ್ದಾರೆ.
ಇಂದಿನಿಂದ ಮೂರು ದಿನ ಕಾಲ ರಾಜ್ಯದಲ್ಲಿ ಶೋಕಾಚರಣೆ ಆಚರಿಸಲಾಗುವುದು ಎಂದು ಹೇಳಿದರು.
ಅಂಬರೀಶ್ ಅವರು ನನಗೆ ಆತ್ಮೀಯರಾಗಿದ್ದರು. ಚಿತ್ರರಂಗದ ಉತ್ತಮಕಲಾವಿದ ಇಂದು ನಿಧನರಾಗಿದ್ದಾರೆ. ಅನೇಕ ಬಾರಿ ಕ್ಲಿಷ್ಠ ಸಂದರ್ಭದಲ್ಲಿ ಜೀವ ಉಳಿಸಿಕೊಂಡಿದ್ದರು. ಆದರೆ ಇಂದು ಅವರು ಸಾವನ್ನು ಜಯಿಸಲಾಗಿಲ್ಲ. ಅಂಬರೀಶ್ ವಿಷಯದಲ್ಲಿ ನಮಗೆ ದೇವರ ಕರುಣೆ ಇಲ್ಲವಾಗಿದೆ ಎಂದು ಶೋಕ ವ್ಯಕ್ತ ಪಡಿಸಿದರು.
ಭಾನುವಾರ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಅಭಿಮಾನಿಗಳು ತಾಳ್ಮೆ ಕಳೆದುಕೊಳ್ಳದೆ, ಶಾಂತಿಯುತವಾಗಿರಬೇಕು. ಅಂಬರೀಶ್ ಅಂಯ್ಯಕ್ರಿಯೆಗೆ ತಾಳ್ಮೆಯಿಂದ ಸಹಕರಿಸಿ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಹಕಾರ ನೀಡಿ ಎಂದು ಮನವಿ ಮಾಡಿದರು.
ಕುಟುಂಬದ ಕ್ರಿಯಾವಿಧಿಗಳು ಪೂರ್ಣಗೊಂಡ ನಂತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.
ಮಂಡ್ಯಕ್ಕೆ ಪಾರ್ಥಿವ ಶರೀರ ತೆಗೆದುಕೊಂಡು ಹೋಗಿ ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು ಎಂಬುದು ಅಂಬರೀಶ್ ಅವರ ಪುತ್ರ ಅಭಿಷೇಕ ಅವರ ಆಸೆ. ಆದರೆ ಬೆಂಗಳೂರಿನಿಂದ ಮಂಡ್ಯಕ್ಕೆ ತೆಗೆದುಕೊಂಡು ಹೋಗಿ ಮತ್ತೆ ವಾಪಾಸ್ ತರುವುದು ಕಷ್ಟವಾಗುವುದೆ. ಅಭಿಷೇಕ್ ನನ್ನ ಮಗನ ಸಮಾನ ಆತನ ಆಸೆ ನನಗೆ ಅರ್ಥವಾಗುತ್ತದೆ. ಆದರೆ ವಾಸ್ತವವಾಗಿ ಆ ರೀತಿ ಮಾಡುವುದು ಕಷ್ಟವಾಗಲಿದೆ. ಮಂಡ್ಯದ ಜನ ಬೆಂಗಳೂರಿಗೆ ಬಂದು ಅಂತಿಮ ದರ್ಶನ ಪಡೆಯಲು ಮಂಡ್ಯ, ಮೈಸೂರು ಭಾಗದ ಜನರಿಗೆ ಕೆಎಸ್ ಆರ್ ಟಿಸಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡುವುದಾಗಿ ಹೇಳಿದರು.
Related Articles
Thank you for your comment. It is awaiting moderation.
Comments (0)