ಸುಳ್ವಾಡಿ ವಿಷಪ್ರಸಾದ ಸೇವನೆ ಪ್ರಕರಣ: ಸಂತ್ರಸ್ತರಿಗೆ ಸಿಎಂ ಸಾಂತ್ವನ
- by Suddi Team
- December 25, 2018
- 27 Views

ಕೊಳ್ಳೆಗಾಲ: ಸುಳ್ವಾಡಿ ಪ್ರಸಾದ ಸೇವನೆ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಗಳ ಸಂತ್ರಸ್ತರಿಗೆ ಹನೂರು ತಾಲ್ಲೂಕು ಬಿದರಹಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಾಂತ್ವನ ಹೇಳಿದರು.
ಈ ಪ್ರಕರಣದಲ್ಲಿ ಮೃತಪಟ್ಟ 17 ಜನರ ಕುಟುಂಬದವರು ಹಾಗೂ ಅಸ್ವಸ್ತರಾಗಿ ಚಿಕಿತ್ಸೆ ಪಡೆಯುತ್ತಿರುವ ಕುಟುಂಬಗಳಿಗೆ ಸ್ಥೈರ್ಯ ತುಂಬಿದರು.
ಪ್ರತೀ ಸಂತ್ರಸ್ಥರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅವರು ಕುಂದುಕೊರತೆಗಳನ್ನು ವಿಚಾರಿಸಿದರು. ಸರ್ಕಾರದಿಂದ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಲಿದ್ದೇವೆ. ಸರ್ಕಾರ ನಿಮ್ಮೊಂದಿಗಿದೆ ಧೈರ್ಯವಾಗಿ ಇರಿ ಎಂದು ಮುಖ್ಯಮಂತ್ರಿಗಳು ಆತ್ಮವಿಶ್ವಾಸ ತುಂಬಿದರು..
ಸಂತ್ರಸ್ತ ಕುಟುಂಬದವರ ಮುಂದಿನ ನೆಮ್ಮದಿ ಜೀವನ ನಿರ್ವಹಣೆಗೆ ಸರ್ಕಾರದಿಂದ ಶಾಶ್ವತ ಯೋಜನೆ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿಯವರು ತಿಳಿಸಿದರು.
ಈಗಾಗಲೇ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಲು 80 ಲಕ್ಷ ರೂಪಾಯಿಗಳು ಬಿಡುಗಡೆ ಮಾಡಲಾಗಿದೆ ಎಂದರು.
ಸಂತ್ರಸ್ತರ ಭವಿಷ್ಯದ ಜೀವನ, ಯುವಕರು, ಮಹಿಳೆಯರು, ಕೂಲಿ ಕಾರ್ಮಿಕರ ಆರ್ಥಿಕ ಸ್ಥಿತಿ ಉತ್ತಮವಾಗಿಸಲು ನೆರವಾಗಲು ಪೈಲಟ್ ಯೋಜನೆಯೊಂದನ್ನು ತಯಾರಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಮುಖ್ಯಮಂತ್ರಿ ಅವರು ಸೂಚಿಸಿದರು.
ಈ ವೇಳೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ, ಉನ್ನತ ಶಿಕ್ಷಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ.ದೇವೇಗೌಡ, ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು ಪ್ರವಾಸೋದ್ಯಮ ಸಚಿವರಾದ ಸಾ.ರಾ. ಮಹೇಶ್ ಮತ್ತಿತರರು ಹಾಜರಿದ್ದರು.
Related Articles
Thank you for your comment. It is awaiting moderation.
Comments (0)