ಕೃಷ್ಣ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು
- by Suddi Team
- May 18, 2020
- 100 Views
ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ಈಜಲು ಹೋದ ವ್ಯಕ್ತಿ ನೀರಲ್ಲಿ ಮುಳುಗಿ ಸಾವಿಗೀಡಾದ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ ಪಟ್ಟಣದ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.
ಬನಹಟ್ಟಿ ನಿವಾಸಿ ವರ್ಷದ ಪ್ರಕಾಶ್ ಮಂಟೂರು (31) ಮೃತ ವ್ಯಕ್ತಿಯಾಗಿದ್ದು, ಈತ ಸಿವಿಲ್ ಗುತ್ತಿಗೆದಾರನಾಗಿದ್ದ ಎಂದು ತಿಳಿದು ಬಂದಿದೆ. ಮೃತ ಪ್ರಕಾಶ್ ಹಾಗೂ ಸ್ನೇಹಿತರೆಲ್ಲರೂ ಸೇರಿ ಈಜೋಕೆ ಅಂತಾ ಕೃಷ್ಣಾ ನದಿಗೆ ಹೋಗಿದ್ದರು ಎನ್ನಲಾಗ್ತಿದೆ. ಸದ್ಯ ನದಿಯಲ್ಲಿ ಮುಳುಗಿದ್ದ ಪ್ರಕಾಶ್ ಮೃತದೇಹವನ್ನು ಹೊರ ತೆಗೆಯಲಾಗಿದ್ದು, ಈ ಬಗ್ಗೆ ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Articles
Thank you for your comment. It is awaiting moderation.


Comments (0)