“ಕಾಲ” ವೀಕ್ಷಿಸಿದವರ ಸನ್ಮಾನ: ವಿನೂತನ ಪ್ರತಿಭಟನೆ

ತುಮಕೂರು: ರಜನೀಕಾಂತ್ ಅಭಿಯನದ ಕಾಲಾ ಚಿತ್ರ ಪ್ರದರ್ಶನಕ್ಕೆ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳ ಸಾಕಷ್ಟು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿವೆ. ಈ ಮಧ್ಯೆ ತುಮಕೂರು ಜಿಲ್ಲೆಯ ಕೊರಟಗೆರೆಯ ಚಿತ್ರಮಂದಿರವೊಂದರಲ್ಲಿ ಕಾಲಾ ಚಿತ್ರ ಬಿಡುಗಡೆಯಾಗಿದ್ದು ಚಿತ್ರ ವಿಕ್ಷಿಸಿದವರಿಗೆ ಹೂವಿನ ಅಭಿಷೇಕ ಮಾಡುವ ಮೂಲಕ ಯುವಕರು ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಕೊರಟಗೆರೆಯ ಶಿವಗಂಗಾ ಚಿತ್ರಮಂದಿರದಲ್ಲಿ ಕಾಲಾ ಚಿತ್ರ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಜಿಲ್ಲೆಯ 10 ತಾಲೂಕುಗಳ ಪೈಕಿ ಕೊರಟಗೆರೆ ಪಟ್ಟಣದಲ್ಲಿ ಮಾತ್ರ ಚಿತ್ರ ಬಿಡುಗಡೆಯಾಗಿದ್ದು, ಮಧುಗಿರಿ, ಪಾವಗಡ, ತುಮಕೂರು, ಸಿರಾ ಕಡೆಯಿಂದ ಕೊರಟಗೆರೆ ಕಡೆಗೆ ಪ್ರೇಕ್ಷಕರು ಆಗಮಿಸುತ್ತಿದ್ದಾರೆ.

ಕನ್ನಡಪರ ಸಂಘಟನೆಯ ಕಾರ್ಯಕರ್ತರು ಚಿತ್ರ ವೀಕ್ಷಿಸಿ ಹೊರ ಬಂದ ಪ್ರೇಕ್ಷಕರಿಗೆ ಹೂವಿನ ಹಾರ ಹಾಕಿ, ಪುಷ್ಪಾರ್ಚನೆ ಮಾಡಿ ಸನ್ಮಾನ ಮಾಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ.

Related Articles

Comments (0)

Leave a Comment