ಯಡಿಯೂರಪ್ಪ ಪೂರ್ಣಾವಧಿ ಮುಗಿಸಲಿದ್ದಾರೆ: ಶ್ರೀರಾಮುಲು
- by Suddi Team
- June 1, 2020
- 19 Views

ಬೆಂಗಳೂರು: ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಬಸವರಾಜ್ ಪಾಟೀಲ್ ಯತ್ನಾಳ್, ನಿರಾಣಿ, ಕತ್ತಿಯವರು ನಮ್ಮ ಹಿರಿಯ.ನಾಯಕರು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ, ಅದು ವ್ಯತ್ಯಾಸ ಅಲ್ಲ. ಈ ಬಗ್ಗೆ ಜನರಲ್ಲಿ ಗೊಂದಲ ಉಂಟಾಗಬಾರದು. ಯಡಿಯೂರಪ್ಪ ಮುಂದಿನ ಮೂರು ವರ್ಷ ಸಿಎಂ ಆಗಿ ಇರ್ತಾರೆ. ಎಲ್ಲಾ ಒಗ್ಗಟ್ಟಿನಿಂದ ಇದ್ದೇವೆ. ನಮ್ಮಲ್ಲಿ ಭಿನ್ನಾಭಿಪ್ರಾಯ ಇಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
7 ಮಿನಿಸ್ಟರ್ ಕ್ವಾಟ್ರಸ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು
ಮುಖ್ಯಮಂತ್ರಿ ಯಡಿಯೂಪ್ಪನವರು ನಾಡಿನ ಅಭಿವೃದ್ಧಿಗೂ ಪಣತೊಟ್ಟು ನಿಂತವರು. ಕೊರೋನಾ ಶುರುವಾದಗಲೇ ಲಾಕ್ ಡೌನ್ ಷೋಷಣೆ ಮಾಡಿ ಸಮಸ್ಯೆ ಗೆ ಸ್ಪಂದಿಸಿದ್ದಾರೆ. ಆಹಾರ ಪೂರೈಕೆಯಲ್ಲಿ ಕೂಡ ಯಾವುದೇ ಸಮಸ್ಯೆಯಾಗದ ಹಾಗೆ ನೋಡಿಕೊಂಡಿದ್ದಾರೆ.Front line worries ಗೆ ಮೃತ ಪಟ್ಟರೆ 30ಲಕ್ಷ ರೂ ಅನುದಾನ ಘೋಷಣೆ ಮಾಡಿದ್ದಾರೆ.ಇನ್ನು ಸರ್ಕಾರ ರಚನೆಯಾದ ಹೊಸತರಲ್ಲಿ ನೆರೆಹಾವಳಿ ವೇಳೆ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ 24ಗಂಟೆ ಸಿಎಂ ಕೆಲಸ ಮಾಡಿದ್ದಾರೆ. ಅವರು ಸಮರ್ಥ ನಾಯಕರು ಎಂದು ಶ್ರೀರಾಮುಲು ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪಕ್ಷ. ಇಲ್ಲಿ ಯಾರೇ ಮಂತ್ರಿಯಾಗಬೇಕು ಅಂದ್ರು ಹೈಕಮಾಂಡ್ ತೀರ್ಮಾನ ಮಾಡುತ್ತೆ.
ನಾನು 3ನೇ ಬಾರಿ ಮಂತ್ರಿಯಾಗಿದ್ದೇನೆ
ಸ್ವಾರ್ಥದಿಂದ ರಾಜಕೀಯ ಮಾಡಿದ ವ್ಯಕ್ತಿ ಅಲ್ಲ ನಾನು. ಸಮರ್ಥವಾಗಿ ಈ ಹಿಂದೆ ಆರೋಗ್ಯ ಇಲಾಖೆ ನಿರ್ವಹಿಸಿದೆ.
ಹಾಗಾಗೀ ಈ ಬಾರಿ ಅದೇ ಕೊಟ್ಟಿದ್ದಾರೆ.
ನಾನು ಡಿಸಿಎಂ ಕೊಟ್ಟಿಲ್ಲ ಅಂತ ಯಾವತ್ತು ನೋವು ಪಟ್ಟಿಲ್ಲ. ಪಕ್ಷ ನಂಗೆ ರಾಜೀನಾಮೆ ಕೊಡೊದಕ್ಕೆ ತಿಳಿಸಿದ್ರೆ
ಖಂಡಿತವಾಗಿಯೂ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಶ್ರೀರಾಮುಲು ಹೇಳಿದ್ದಾರೆ.
ಪಿಪಿಈ ಕಿಟ್ ಖರೀದಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ . ಯಾವುದೇ ದಾಖಲೆ ಬೇಕಾದ್ರೂ ಕೊಡ್ತೇವೆ.ಹೆಚ್ ಕೆ ಪಾಟೀಲ್ ಕೇಳಿರುವ ದಾಖಲೆಯನ್ನು ನಾನೇ ಅವರಿಗೆ ಕಳುಹಿಸಿ ಕೊಡ್ತೇನೆ. ಸ್ಪೀಕರ್ ಪರಮಾಧಿಕಾರ ದ ಬಗ್ಗೆ ನಾನು ಪ್ರಶ್ನೆ ಮಾಡಲ್ಲ ಎಂದು ಸಚಿವರಾದ ಶ್ರೀರಾಮುಲು ತಿಳಿಸಿದ್ದಾರೆ.
Related Articles
Thank you for your comment. It is awaiting moderation.
Comments (0)