ಮೇಕೆದಾಟು ಯೋಜನೆಗೆ ತಮಿಳುನಾಡು,ಕೇಂದ್ರ ಸರ್ಕಾರದ ತಕರಾರು ಸಲ್ಲದು; ಸಿಎಂ ಸಿದ್ದರಾಮಯ್ಯ
- September 13, 2025
- 0 Likes
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋವೊಂದು ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಂಬಾಗಿಲಿನಲ್ಲಿ ನಡೆದಿದೆ. ಕುಂದಾಪುರದಿಂದ ಉಡುಪಿಗೆ ತರಕಾರಿ ಹೊತ್ತು ತರುತ್ತಿದ್ದ ಟೆಂಪೋ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಮತ್ತು ಸಹ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ರ ಅಂಬಾಗಿಲು ಬಳಿ ಈ ಅಪಘಾತ ನಡೆದಿದೆ. ದಿನೇಶ್ (35 )ಮತ್ತು ಮಂಜು (30 ) ಮೃತ ದುರ್ದೈವಿಗಳಾಗಿದ್ದು, ಇಬ್ಬರೂ ಉದ್ಯಾವರದಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದರು.
ಕುಂದಾಪುರದಿಂದ ಉದ್ಯಾವರಕ್ಕೆ ಟೆಂಪೋ ಟ್ರಾಕ್ಸ್ ನಲ್ಲಿ ತರಕಾರಿ ಸಾಗಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,
ಮೃತ ದೇಹವನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
Comments (0)