ಗಲಾಟೆ ಬಿಡಿಸಲು ಬಂದ ಪೊಲೀಸರಿಗೆ ಥಳಿಸಿದ ದುಷ್ಕರ್ಮಿ!
- by Suddi Team
- July 10, 2020
- 113 Views
ಮಂಗಳೂರು: ಗಲಾಟೆ ನಡೆಯುತ್ತಿದ್ದ ಸ್ಥಳಕ್ಕೆ ಹೋದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ನಲ್ಲಿ ನಡೆದಿದೆ.
ಲಾರಿ ಚಾಲಕರು ಹಾಗೂ ಸಾರ್ವಜನಿಕರ ಮಧ್ಯೆ ಗಲಾಟೆ ನಡಿತಿದೆ ಎಂಬ ಮಾಹಿತಿ ಸಿಕ್ಕ ಹಿನ್ನೆಲೆ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ರು. ಇದೇ ವೇಳೆ ಸ್ಥಳದಲ್ಲಿ ಕೈಯಲ್ಲಿ ಕಬ್ಬಿಣದ ರಾಡನ್ನು ಹಿಡಿದುಕೊಂಡು ಗಲಾಟೆ ಮಾಡುತ್ತಿದ್ದ ಅಬ್ದುಲ್ ಸಲಾಂ ಎಂಬಾತನ ಬಳಿ ತೆರಳಿ ಗಲಾಟೆಯನ್ನು ನಿಯಂತ್ರಿಸಲು ಪ್ರಯತ್ನಿಸಿದಾಗ ಆತ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಅಲ್ಲದೆ, ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿ ಕೊಲೆ ಬೆದರಿಕೆ ಒಡ್ಡಿದ್ದಾನೆ. ನಂತರ ಕೈಯಲ್ಲಿದ್ದ ಕಬ್ಬಿಣದ ರಾಡಿನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಸ್ಥಳದಲ್ಲಿದ್ದ ಇಲಾಖಾ ವಾಹನವನ್ನು ರಾಡ್ ನಿಂದ ಹೊಡೆದು ಜಖಂಗೊಳಿಸಿದ್ದು, ಸುಮಾರು 10,000 ರೂಪಾಯಿಯಷ್ಟು ನಷ್ಟವುಂಟಾಗಿದೆ. ಈ ವೇಳೆ ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಪೊಲೀಸರ ಮೇಲಿನ ಹಲ್ಲೆ ತಡೆಯಲು ಆರೋಪಿಗೆ ಥಳಿಸಿದ್ದಾರೆ. ಹಲ್ಲೆಗೊಳಗಾದ ಪೊಲೀಸರರು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೂ ಆರೋಪಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related Articles
Thank you for your comment. It is awaiting moderation.


Comments (0)