ಇಡೀ ರಾಜ್ಯಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಿ: ದೇವೇಗೌಡ

ಬೆಂಗಳೂರು: ಕೋವಿಡ್-19 ಹರಡುವಿಕೆ ನಿಯಂತ್ರಣಕ್ಕಾಗಿ ಒಂದು ವಾರದ ಲಾಕ್ ಡೌನ್ ಬೆಂಗಳೂರಿಗೆ ಸೀಮಿತಗೊಳಿಸದೇ ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡುವಂತೆ ಮಾಜಿ ಪ್ರಧಾನಮಂತ್ರಿ ಎಚ್.ಡಿ‌ ದೇವೇಗೌಡರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕರೋನ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೆ ತಿಂಗಳು 14ರ ರಾತ್ರಿ 8 ಗಂಟೆ ಯಿಂದ ಲಾಕ್ ಡೌನ್ ಜಾರಿ ಮಾಡಿದೆ ಇದು ಸ್ವಾಗತಾರ್ಹ ಇದರ ಜೊತೆಗೆ ಇಡಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲು ಮಾಧ್ಯಮಗಳ ಮುಖೇನ ರಾಜ್ಯ ಸರ್ಕಾರವನ್ನು ನಾನು ಆಗ್ರಹಿಸುತ್ತೀನಿ ಎಂದಿದ್ದಾರೆ.

ರಾಜ್ಯದ ಜನತೆಯ ಜೊತೆಗೆ ನಮ್ಮ ಇಡಿ ದೇಶದ ಜನತೆಗೆ ನಾನು ಮನವಿ ಮಾಡಿಕೊಳ್ಳುತ್ತೀನಿ ನಮಗೆ ಆರೋಗ್ಯವೇ ಭಾಗ್ಯ ಆದ್ದರಿಂದ ದಯವಿಟ್ಟು ಮನೆಯಿಂದ ಹೊರ ಹೋಗಬೇಕಾದರೆ ದಯವಿಟ್ಟು ಮಾಸ್ಕ್ ಧರಿಸಿ ,, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ,, ಏನೇ ಮುಟ್ಟಬೇಕಾದರು ಸ್ಯಾನಿಟೈಸರ್ ನಿಂದ ಕೈ ಅನ್ನು ಸ್ವಚ್ಛ ಗೊಳಿಸಿ ನಂತರ ಮುಟ್ಟಿ ,, ಮುಖ್ಯವಾದ ಕೆಲಸ ಕಾರ್ಯಗಳು ಇದ್ದರೆ ಮಾತ್ರ ಮನೆಯಿಂದ ಹೊರ ಬನ್ನಿ

ಇನ್ನೊಂದು ಪ್ರಮುಖವಾದ ವಿಷಯ ಈ ಮಹಾಮಾರಿ ವೈರಸ್ಸನ್ನು ತಡೆಗಟ್ಟಲು ರಾಜ್ಯ ಸರ್ಕಾರ ಅನೇಕ ಪ್ಯಾಕೇಜುಗಳನ್ನು ಘೋಷಿಸಿದೆ ಅದರಲ್ಲಿ ಅವ್ಯವಹಾರ ನಡೆದಿದೆ ಎಂದು ಅನೇಕ ನಾಯಕರುಗಳು ಆಪಾದಿಸುತ್ತಿದ್ದಾರೆ ಅದೇನೇ ಇದ್ದರೂ ಮುಂಬರುವ ಅಧಿವೇಶನದಲ್ಲಿ ಚರ್ಚೆಮಾಡಲಿ ಈಗ ನಮಗೆ ಜನತೆಯ ಆರೋಗ್ಯ ಮುಖ್ಯ ,, ಮೊದಲು ನಾವೆಲ್ಲ ಅದರ ಕಡೆ ಗಮನ ಹರಿಸೋಣ ಸರ್ಕಾರವು ಸಹ ಇದರ ನಿಟ್ಟಿನಲ್ಲಿ ಕೆಲಸ ಮಾಡಬೇಕು ನಾವೆಲ್ಲ ಜೊತೆಗಿದ್ದೀವಿ ,, ಜನತೆಯ ಆರೋಗ್ಯದ ಜೊತೆ ಚೆಲ್ಲಾಟ ಬೇಡ ,, ದಯವಿಟ್ಟು ಇನ್ನು ಮುಂದಾದರು ಎಚ್ಚೆತ್ತು ಕೆಲಸ ಮಾಡಿ ಎಂದು ಮನವಿ ಮಾಡುತ್ತೀನಿ ಎಂದು ತಿಳಿಸಿದ್ದಾರೆ.

Related Articles

Comments (0)

Leave a Comment