ಕೊರೋನಾ ಭ್ರಷ್ಟಚಾರದ ಬಗ್ಗೆ ಸಿಎಂ ಬಿಎಸ್ವೈ ಉತ್ತರ ನೀಡ್ಬೇಕು: ಡಿಕೆಶಿ
- by Suddi Team
- July 18, 2020
- 100 Views
ಬೆಂಗಳೂರು: ಕೊರೋನಾ ವಿಚಾರದಲ್ಲಿ ಸರ್ಕಾರ ಕಾರ್ಯವೈಖರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ದ ಟ್ವೀಟ್ ಮಾಡಿರುವ ಡಿಕೆಶಿ, ವೆಂಟಿಲೇಟರ್ ಖರೀದಿಯಲ್ಲಿ ಬಿಜೆಪಿ ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಜಗಜ್ಜಾಹಿರಾಗಿದೆ. ತಮಿಳುನಾಡು ಸರ್ಕಾರ ತಲಾ 4.78 ಲಕ್ಷ ರೂ.ಗೆ ಖರೀದಿಸಿದ ವೆಂಟಿಲೇಟರ್ ಗೆ ಕರ್ನಾಟಕ ಸರಕಾರ 18.20 ಲಕ್ಷ ರುಪಾಯಿ ಕೊಟ್ಟಿದೆ. ಈ ‘CORONA CORRUPTION’ ಬಗ್ಗೆ ಸಿಎಂಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದ್ದಾರೆ.
ವೆಂಟಿಲೇಟರ್ ಸಿಗದೆ ಕರ್ನಾಟಕದ ಕೊರೊನಾ ಸೋಂಕಿತರು ಸಾಯ್ತಾ ಇದ್ದರೆ. ಬಿಜೆಪಿ ಮಂತ್ರಿಗಳು ಪಿಪಿಇ ಕಿಟ್ ಗಳಿಂದ ಹಿಡಿದು ಬೆಡ್ ಗಳವರೆಗೂ ಎಲ್ಲ ಕೊರೊನಾ ಚಿಕಿತ್ಸೆ ಸಲಕರಣೆಗಳ ಖರೀದಿಯಲ್ಲಿ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದ್ದಾರೆ. ಬಿಜೆಪಿ ಸರಕಾರ ಕೊರೊನಾ ಸಂಕಷ್ಟ ಸಂದರ್ಭವನ್ನೂ ಲೂಟಿ ಮಾಡಲು ಬಳಸಿಕೊಂಡಿದೆ ಅಂತಾ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Related Articles
Thank you for your comment. It is awaiting moderation.


Comments (0)