ಐವರು ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಐವರು ನಾಮ ನಿರ್ದೆಶನಗೊಂಡ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಸಿ.ಪಿ. ಯೋಗೇಶ್ವರ್, ಎಚ್. ವಿಶ್ವನಾಥ್, ಶಾಂತಾರಾಮ್ ಸಿದ್ದಿ, ಭಾರತಿ ಶೆಟ್ಟಿ ಹಾಗೂ ಸಾಬಣ್ಣ ತಳವಾರ ಪ್ರಮಾಣ ವಚನ ಸ್ವೀಕರಿಸಿದರು.ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು.

ನಂತರ ಸುದ್ದಿಗೋಷ್ಟಿ ನಡೆಸಿದ ಎಚ್. ವಿಶ್ವನಾಥ್,
ನಾಮ.ನಿರ್ದೇಶನಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ಮೋದಿ,ಕೇಂದ್ರ ಗೃಹ ಸಚಿವ ಅಮಿತ್ ಶಾ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ. ನಡ್ಡಾ,ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ರು.ಭಾರತೀಯ ಜನತಾ ಪಕ್ಷದ ಇಡಿ ಕುಟುಂಬ ನಮಗೆ ಆಶೀರ್ವಾದ ಮಾಡಿರುವುದು ಸಂತೋಷವಾಗಿದೆ ಎಂದ್ರು.

ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ಕೊರೋನಾ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಎಲ್ಲ ಜನ ಪ್ರತಿನಿಧಿಗಳು ಕೊರೊನಾ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾವೂ ಅವರೊಂದಿಗೆ ಕೈ ಜೋಡಿಸಿ ಕೆಲಸ ಮಾಡುತ್ತೇವೆ ಎಂದ್ರು.

ಶಾಂತಾರಾಮ್ ಬುಡ್ನಾ ಅವರು ಆ ಸಮಾಜದ ಅಭಿವೃದ್ಧಿಗೆ ಎಲೆ ಮರೆ.ಕಾಯಿಯಂತೆ ಕೆಲಸ ಮಾಡುತ್ತಿದ್ದರು. ಅವರ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಸಮಾಜದ ಅಭಿವೃದ್ಧಿಗೆ ಸರ್ಕಾರದ ಮಟ್ಟದಿಂದಲೂ ಎಲ್ಲ ಸಹಕಾರ ನೀಡುತ್ತದೆ.ಬಿಜೆಪಿ ಎಲ್ಲ ಜಾತಿ ಜನಾ ಜನಾಂಗಕ್ಕೆ ಅವಕಾಶ ನೀಡುತ್ತಿದೆ. ಇದು ಪಕ್ಷದ ಕಾರ್ಯ ಕರ್ತರಿಗೆ ಉತ್ಸಾಹ ಹೆಚ್ಚಾಗುವಂತೆ ಮಾಡಿದೆ ಎಂದ್ರು‌

ನಾಲಿಗೆ ಮೇಲೆ ನಿಂತ ನಾಯಕ ಯಡಿಯೂರಪ್ಪ.ಮಾತಿಗೆ ತಪ್ಪದ ನಾಯಕ ಯಡಿಯೂರಪ್ಪ.ನಾವೆಲ್ಲ ಅವರ ಬೆಂಬಲಕ್ಕೆ ಇದೀವ ಎಂದ್ರು.

ಸಿ.ಪಿ ಯೋಗೇಶ್ವರ್ ಮಾತನಾಡಿ,ನನ್ನ ಆಯ್ಕೆಯಲ್ಲಿ ಪಕ್ಷದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಪಕ್ಷ ಹಾಗೂ ಯಡಿಯೂರಪ್ಪ ಎಲ್ಲರೂ ಒಮ್ಮತದಿಂದ ಆಯ್ಕೆ ಮಾಡಿದಾರೆ. ನನ್ನನ್ನು ಪರಿಷತ್ ಸದಸ್ಯನನ್ನಾಗಿ ಆಯ್ಕೆ ಮಾಡಿರುವುದು ಪುಣ್ಯ, ಸಂಪುಟಕ್ಕೆ ಸೇರಿಸಿಕೊಳ್ಳುವುದು ಪಕ್ಷದ ನಾಯಕರಿಗೆ ಬಿಟ್ಟ ವಿಚಾರ ಎಂದ್ರು.

ಡಿ.ಕೆ ಶಿವಕುಮಾರ್ ಅವರು ಕುಮಾರಸ್ವಾಮಿ ಮೂಲ ಕ್ಷೇತ್ರ ರಾಮನಗರದಲ್ಲಿಯೇ ಅವರ ಬುಡಕ್ಕೆ ಕೈ ಹಾಕಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಡಿ.ಕೆ.ಶಿ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಡಿ.ಕೆ.ಶಿ ಹಾಗೂ ಕುಮಾರಸ್ವಾಮಿ ಅನುಕೂಲಕ್ಕೆ ತಕ್ಕಂತೆ ರಾಜಕಾರಣ ಮಾಡುತ್ತಾರೆ.ಇಷ್ಟು ದಿನ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಬಂದಿದ್ದರು. ಈಗ ಇಬ್ಬರಿಗೂ ಅಸ್ತಿತ್ವದ ಪ್ರಶ್ನೆಯಾಗಿದೆ ಹೀಗಾಗಿ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ ಎಂದ್ರು.

ಕುಮಾರಸ್ವಾಮಿಗೆ ಈಗ ಅಸ್ತಿತ್ವದ ಪ್ರಶ್ನೆ ಇದೆ ಅದಕ್ಕೆ ಮಾತನಾಡುತ್ತಿದ್ದಾರೆ. ಅವರ ಮಾತುಗಳನ್ನು ಮೇಲ್ನೋಟಕ್ಕೆ ನೋಡಿದರೆ ಬಿಜೆಪಿಗೆ ಬೆಂಬಲ ಕೊಡುತ್ತಿದ್ದಾರೆ ಅಂತ ಕಾಣಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಕುಮಾರಸ್ವಾಮಿ ಹೇಳಿರುವ ಎಲ್ಲ ಕೆಲಸಗಳೂ ಆಗುತ್ತಿವೆ. ಅವರು ಹೇಳಿದ ಅಧಿಕಾರಿಗಳನ್ನು ವರ್ಗಾವಣೆ ಮಾಡಿಕೊಡಲಾಗುತ್ತಿದೆ. ಹೀಗಾಗಿ ಅವರೂ ಬಿಜೆಪಿಗೆ ಸಫೋರ್ಟ್ ಮಾಡಲು ಮುಂದಾಗಿದ್ದಾರೆ.ಡಿ. ಕೆ. ಶಿವಕುಮಾರ್ ಹಗಲು ಹೊತ್ತಲ್ಲಿ ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಾರೆ. ರಾತ್ರಿಯಾದರೆ ನಮ್ಮ ಮುಖ್ಯಮಂತ್ರಿ ಬಳಿ ಬಂದು ಕೆಲಸ ಮಾಡಿಸಿಕೊಳ್ಳುತ್ತಾರೆ.ಇಬ್ಬರೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿ ಎಂದು ಬಯಸುತ್ತಾರೆ.ಇಬ್ಬರೂ ನಾಯಕರು ಸಂದರ್ಭಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಅವರನ್ನ ನಂಬಿ ಕಾರ್ಯಕರ್ತರು ಹಾಳಾಗ್ತಿರಿ ಅದಕ್ಕೆ ಬಿಜೆಪಿ ಸೇರುವಂತೆ ಬಹಿರಂಗವಾಗಿ ಆಹ್ವಾನ ನೀಡುತ್ತಿದ್ದೇನೆ ಎಂದ್ರು.

Related Articles

Comments (0)

Leave a Comment