ಪ್ರವಾಹ ಬಾದಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿಎಂ ಗೋವಿಂದ ಕಾರಜೋಳ
- by Suddi Team
- August 8, 2020
- 109 Views
ಬಾಗಲಕೋಟೆ: ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಅತಿವೃಷ್ಟಿ ಪ್ರವಾಹ ಹಾನಿ, ಪರಿಹಾರ ಕ್ರಮಗಳ ಕುರಿತು ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ, ಸಂಭವಿಸಬಹುದಾದ ಹೆಚ್ವು ಹಾನಿಯನ್ನು ತಡೆಗಟ್ಟಲು ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸನ್ನದ್ಧ ವಾಗಬೇಕು ಎಂದು ಸೂಚಿಸಿದರು.
ನಂತರ ಮಾಚಕನೂರು ಸೇರಿದಂತೆ ಇತರ ಪ್ರವಾಹ ಭಾದಿತ ಗ್ರಾಮಗಳಿಗೆ ಭೇಟಿ ನೀಡಿದ ಡಿಸಿಎಂ ಪರಿಶೀಲಿಸಿ ಜಿಲ್ಲಾಡಳಿತ ಕ್ಕೆ ನಿರ್ದೇಶಿಸಿದರು. ಸಂದರ್ಭದಲ್ಲಿ ಸಂಸದರಾದ ಶ್ರೀ ಪಿ.ಸಿ.ಗದ್ದಿಗೌಡರ್ , ಶಾಸಕರಾದ ಡಾ.ವೀರಣ್ಣ ಚರಂತಿಮಠ ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ರಾಜೇಂದ್ರ, ಎಸ್ಪಿ ಶ್ರೀ ಲೋಕೇಶ್ ಜಗಲಾಸ್ಕರ್, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Related Articles
Thank you for your comment. It is awaiting moderation.


Comments (0)