ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ: ಆತಂಕದಲ್ಲಿ ವಾಹನ ಸವಾರರು
- by Suddi Team
- June 12, 2018
- 105 Views
ಬೆಳ್ತಂಗಡಿ: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಚಾರ್ಮಾಡಿ ಘಾಟ್ನಲ್ಲಿ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಭಾರೀ ಗುಡ್ಡ ಕುಸಿತ ಸಂಭವಿಸಿದೆ. ನಿನ್ನೆ ಸಂಜೆಯಿಂದ ನೂರಾರು ವಾಹನಗಳು ಹಿಂದೆ-ಮುಂದೆ ಚಲಿಸಲಾಗದೆ ಸವಾರರು ಆತಂಕದಲ್ಲಿ ಮುಳುಗಿದ್ದಾರೆ.
ಬೆಳ್ತಂಗಡಿ ಸುತ್ತಮುತ್ತ ಬೃಹತ್ ಗುಡ್ಡ ಕುಸಿದು ರಸ್ತೆ ಸಂಪೂರ್ಣ ಬಂದ್ ಆಗಿದೆ. ವಾಹನ ಸವಾರರು ಊಟ, ತಿಂಡಿಯಲ್ಲದೆ ಪರದಾಡುವಂತಾಗಿದೆ. ಸ್ಥಳೀಯರು ಆಹಾರದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಸ್ಥಳೀಯ ಪೊಲೀಸರು ರಸ್ತೆ ತೆರವು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, ಸ್ಥಳಕ್ಕೆ ತೆರಳಲು ಹರಸಾಹಸ ಪಡಬೇಕಾಗಿದೆ. ಇನ್ನೂ ಗುಡ್ಡ ಕುಸಿಯುವ ಭೀತಿಯಿಂದ ವಾಹನದಲ್ಲಿರುವ ಸವಾರರು ಆತಂಕದಲ್ಲಿದ್ದಾರೆ.
Related Articles
Thank you for your comment. It is awaiting moderation.



Comments (0)