ಎಲೆಕ್ಷನ್ ವಾರ್ ಆಯ್ತು ಇನ್ನು ಬೈ ಎಲೆಕ್ಷನ್ ವಾರ್!

ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದ್ದು ಲೋಕಸಭಾ ಚುನಾವಣೆ ಎದುರು ನೋಡುತ್ತಿರುವ ಬೆನ್ನಲ್ಲೇ ಬೈ ಎಲೆಕ್ಷನ್ ಗಳ ಸರಣಿ ಎದುರಾಗುತ್ತಿದೆ.ಅಸೆಂಬ್ಲಿ,ಪಾರ್ಲಿಮೆಂಟ್ ಜೊತೆ ಕೌನ್ಸಿಲ್ ಮಿನಿ ವಾರ್ ನಡೆಯಲಿದೆ.

ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ರಾಮನಗರ ವಿಧಾನಸಭಾ ಕ್ಷೇತ್ರ ಹಾಗು ಸಿದ್ದು ನ್ಯಾಮಗೌಡ ನಿಧನದಿಂದ ತೆರವಾಗಿರುವ
ಜಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಐದು ತಿಂಗಳೊಳಗೆ ಚುನಾವಣೆ ನಡೆಯಬೇಕಿದೆ. ಅದೇ ರೀತಿ ವಿಧಾನಸಭೆಗೆ ಆಯ್ಕೆಯಾಗಿ ಶಿವಮೊಗ್ಗ ಲೋಕಸಭಾ ಸದಸ್ಉತ್ವಕ್ಕ ಬಿ.ಎಸ್.ಯಡಿಯೂರಪ್ಪ,ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಬಿ.ಶ್ರೀರಾಮುಲು ಹಾಗು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಿ.ಎಸದ.ಪುಟ್ಟರಾಜು ರಾಜೀನಾಮೆ ನೀಡಿದ್ದು ಈ ಮೂರು ಸ್ಥಾನಕ್ಕೆ ಉಪ ಚುನಾವಣೆ ಬಾಕಿ ಇದೆ.

ಇನ್ನು ವಿಧಾನಸಭೆಯ ಶಾಸಕರ ಬಲದ ಆಧಾರದಲ್ಲಿ ವಿಧಾನಪರಿಷತ್​ಗೆ ಆಯ್ಕೆಯಾಗಿದ್ದ ಕೆ.ಎಸ್.ಈಶ್ವರಪ್ಪ, ಡಾ.ಜಿ.ಪರಮೇಶ್ವರ್ ಮತ್ತು ವಿ.ಸೋಮಣ್ಣ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದು ಇದರಲ್ಲಿ ಈಶ್ವರಪ್ಪ ಹಾಗೂ ಪರಮೇಶ್ವರ್ ಸ್ಥಾನದ ಪರಿಷತ್ ನ ಅವಧಿ 2020ರ ಜೂನ್​ವರೆಗೆ ಹಾಗೂ ಸೋಮಣ್ಣ ಅವಧಿ 2022ರ ಜುಲೈವರೆಗೆ ಇದೆ. ಇದೀಗ ಈ 3 ಸ್ಥಾನಗಳಿಗೆ ಮತ್ತೆ ಚುನಾವಣೆ ನಡೆಯಬೇಕಾಗಿದೆ.

ಹಾಗೆಯೇ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾದ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ವಿಧಾನಸಭೆಗೆ ಆಯ್ಕೆಯಾಗಿದ್ದು, ಅವರ ಪರಿಷತ್ ಸದಸ್ಯತ್ವ ಅವಧಿ 2022ರ ಜನವರಿವರೆಗೆ ಇದೆ. ಹೀಗಾಗಿ ಈ ಕ್ಷೇತ್ರಕ್ಕೂ ಚುನಾವಣೆ ನಡೆಯಬೇಕಾಗುತ್ತದೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಎಂ.ಡಿ.ಲಕ್ಷ್ಮೀನಾರಾಯಣ ನಾಮನಿರ್ದೇಶಿತ ಕೋಟಾದಲ್ಲಿ ಆಯ್ಕೆಯಾಗಿದ್ದ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜತೆಗೆ ಇನ್ನೆರಡು ನಾಮನಿರ್ದೇಶನಗೊಂಡ ಸದಸ್ಯರ ಅವಧಿ ಆಗಸ್ಟ್ ಎರಡನೇ ವಾರದಲ್ಲಿ ಕೊನೆಗೊಳ್ಳಲಿದೆ. ಒಟ್ಟಾರೆ ಮೂರು ಸ್ಥಾನಗಳಿಗೆ ಸರ್ಕಾರ ನಾಮನಿರ್ದೇಶನ ಮಾಡಬೇಕಾಗುತ್ತದೆ.

Related Articles

Comments (0)

Leave a Comment