ಹೊನ್ನಾಳಿ ತಾಲ್ಲೂಕು ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ಇಂದಿಗೆ ಮುಕ್ತಾಯ; ರೇಣುಕಾಚಾರ್ಯ

ದಾವಣಗೆರೆ: ನನ್ನ ಮತ ಕ್ಷೇತ್ರದ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳಲ್ಲಿ ಕೋವಿಡ್ ಎರಡನೇ ಅಲೆ ಗಣನೀಯವಾಗಿ ಕಡಿಮೆಯಾಗಿದ್ದು ಅರಬಗಟ್ಟೆ ಕೋವಿಡ್ ಆರೈಕೆ ಕೇಂದ್ರವನ್ನು ಇಂದಿಗೆ ಮುಕ್ತಾಯಗೊಳಿಸಲಾಯಿತು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ರು.

ಕಳೆದ ಮೂರು ತಿಂಗಳಿನಿಂದ ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಹಗಲಿರುಳು ನಿರಂತರವಾಗಿ ನನ್ನ ಬಂಧುಗಳ ರಕ್ಷಣೆಗಾಗಿ ಶ್ರಮಿಸಿದ್ದು, ಅನೇಕ ಸಾವುನೋವುಗಳು ಸಂಭಾವಿಸಿದ್ದು ನನ್ನ ಮನಸ್ಸಿಗೆ ತೀವ್ರ ನೋವುಂಟಾಗಿದೆ.
ಎರಡನೇ ಅಲೆಯ ಸಂದರ್ಭದಲ್ಲಿ ವೈಯಕ್ತಿಕವಾಗಿ 4 ಆಂಬುಲೆನ್ಸ್, 50 ಕಾಟ್ & ಬೆಡ್ ಹಾಗೂ ಪ್ರತಿದಿನ ಹೊನ್ನಾಳಿ ತಾಲ್ಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್ ಸೊಂಕಿತರಿಗೆ, ಚಿಕಿತ್ಸೆ ಪಡೆಯಲು ಆಗಮಿಸುವ ಸಾರ್ವಜನಿಕ ಬಂಧುಗಳಿಗೆ ಹಾಗೂ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಸಾವಿರಾರು ಸಾರ್ವಜನಿಕ ಬಂಧುಗಳಿಗೆ ಬೆಳಗ್ಗಿನ ಮತ್ತು ಮಧ್ಯಾಹ್ನದ ಉಪಹಾರ ಸೇವೆಕಾರ್ಯವನ್ನು ಮಾಡಿದ್ದೇನೆ ಎಂದು ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ನಿರಂತರವಾಗಿ ಸೇವೆಸಲ್ಲಿಸಿದ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು, ದಾದಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಸತಿ ಶಾಲೆಯ ಸಿಬ್ಬಂದಿಗಳು, ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಹಾಗೂ ಸಹಕರಿಸಿದ ಪ್ರತಿಯೊಬ್ಬ ಕೋವಿಡ್ ಸೊಂಕಿತ ಬಂಧುಗಳಿಗೆ, ನನ್ನ ಆಪ್ತ ಸಹಾಯಕ ಸಿಬ್ಬಂದಿಗಳಿಗೆ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದರು.

Related Articles

Comments (0)

Leave a Comment