ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪದತ್ಯಾಗ!
- by Suddi Team
- July 26, 2021
- 152 Views
ಬೆಂಗಳೂರು: ಎರಡು ವರ್ಷದ ಸಾಧನೆ ಕಾರ್ಯಕ್ರಮದಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ದುಃಖ ತುಂಬಿದ ಧ್ವನಿಯಲ್ಲೇ ಸಂತೋಷವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಬಿಎಸ್ವೈ ಗದ್ಗದಿತರಾದರು.
ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಕ್ವೆಂಟ್ ಹಾಲ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, 75 ವರ್ಷ ತುಂಬಿದ ಯಡಿಯೂರಪ್ಪನಿಗೆ ಮತ್ತೆ ಎರಡು ವರ್ಷ ಮುಖ್ಯಮಂತ್ರಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಜೆ.ಪಿ.ನಡ್ಡಾ ಅವರಿಗೆ, ಅಮಿತ್ ಶಾ ಅವರಿಗೆ ಶಬ್ದಗಳಲ್ಲಿ ಅಭಿನಂದನೆ ಸಲ್ಲಿಸಲು ಸಾಧ್ಯವಿಲ್ಲ ಎಂದರು.
ಊಟದ ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುವುದಾಗಿ ಕಾರ್ಯಕ್ರಮದಲ್ಲಿ ಬಿಎಸ್ವೈ ಘೋಷಣೆ ಮಾಡಿದರು. ಇನ್ನೂ ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿ ಸಿಎಂ ರಾಜೀನಾಮೆ ನೀಡುತ್ತಾರೆ ಎಂದು ತಿಳಿದುಬಂದಿದೆ.
Related Articles
Thank you for your comment. It is awaiting moderation.


Comments (0)