ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ ನೇರ ಪ್ರಸಾರ
- by Suddi Team
- September 24, 2021
- 20 Views
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಷಣ ವಿಧಾನಸೌಧದಿಂದ ನೇರ ಪ್ರಸಾರ…
1. ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಜಂಟಿ ಸಭೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ.
2. ಇಲ್ಲಿನ ವಿಧಾನ ಸೌಧ ಕಟ್ಟಡವು ಪ್ರಜಾಪ್ರಭುತ್ವದ ಒಂದು ವಿಶಿಷ್ಟ ಸಂಕೇತವಾಗಿದ್ದು ಅದು ಜನರ ಆಶಯಗಳು ಮತ್ತು ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಈ ಐತಿಹಾಸಿಕ ಕಟ್ಟಡ ಮತ್ತು ಪ್ರಜಾಪ್ರಭುತ್ವದೊಂದಿಗಿನ ಅದರ ಸುಧೀರ್ಘ ಪ್ರಯಾಣವು ನಮಗೆ ಹೊಸ ಸ್ಫೂರ್ತಿಯನ್ನು ನೀಡುತ್ತದೆ.
3. ವಿಧಾನಸೌಧವು ಕರ್ನಾಟಕಕ್ಕೆ ಭೇಟಿ ನೀಡುವ ದೇಶೀಯ ಮತ್ತು ವಿದೇಶಿ ಪ್ರವಾಸಿಗರ ಮೇಲೆ ಪ್ರಮುಖವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಳವಡಿಸಿಕೊಳ್ಳುವಲ್ಲಿ ಸ್ಫೂರ್ತಿ ನೀಡುತ್ತದೆ.
4. ಕರ್ನಾಟಕವು ಶ್ರೀಮಂತ ಮತ್ತು ಅದ್ಭುತವಾದ ಇತಿಹಾಸವನ್ನು ಹೊಂದಿದೆ. ಭಗವಾನ್ ಬಸವೇಶ್ವರರ 12 ನೇ ಶತಮಾನದಲ್ಲಿ ನಿರ್ಮಿಸಲಾದ ‘ಅನುಭವ ಮಂಟಪ’ ಪ್ರಸ್ತುತ ಸಂದರ್ಭದಲ್ಲಿ ಜನಪ್ರತಿನಿಧಿಗಳ ಸಂಸತ್ತಿನ ಪ್ರತಿಬಿಂಬವಾಗಿದೆ ರಾಣಿ ಚೆನ್ನಮ್ಮನ ಮಹಾನ್ ಹ್ಯಾಗವು ನಮಗೆ ಸ್ಫೂರ್ತಿ ನೀಡುತ್ತಲೇ ಇದೆ..
5 . ಸ್ನೇಹಿತರೇ, ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಪ್ರಯಾಣವು ರೋಮಾಂಚಕ ಮತ್ತು ಸ್ಫೂರ್ತಿದಾಯಕವಾಗಿದೆ. ಈ ಭವ್ಯವಾದ ಪ್ರಯಾಣಕ್ಕೆ ಕಾರಣರಾದ ರಾಜಕೀಯ ಮುತ್ಸದ್ಧಿಗಳಿಗೆ ನಾನು
ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ . ನಾವು ಅಂತಹವರಿಂದ ಸ್ಫೂರ್ತಿ ಪಡೆಯಬೇಕು.
ನಾನು ಇಂದು ಒಂದು ಪ್ರಮುಖ ವಿಷಯದ ಬಗ್ಗೆ ನನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಿದ್ದೇನೆ. ನಮ್ಮ ಈ ಏಳು ದಶಕಗಳ ಸ್ವಾತಂತ್ರ್ಯದ ಅವಧಿಯಲ್ಲಿ ನಾವು ಅನುಸರಿಸಿದ ಸಂಸದೀಯ ರೂಪ ಆಡಳಿತ ಮಾರ್ಗದಲ್ಲಿ ನಾವು ಪ್ರಜಾಪ್ರಭುತ್ವ ಮೌಲ್ಯಗಳನ್ನು ಕಾಪಾಡುವಲ್ಲಿ ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳನ್ನು ಹೆಚ್ಚು ಜವಾಬ್ದಾರಿಯುತಗೊಳಿಸುವಲ್ಲಿ ನಾವಲ್ಲ. ಇದುವರೆಗೆ ಎಷ್ಟರ ಮಟ್ಟಿಗೆ ಯಶಸ್ವಿಯಾಗಿದ್ದೇವೆ ಎಂದು ಚಿಂತನೆ ನಡೆಸಬೇಕಿದೆ…
7 ಸಂಸದೀಯ ಪ್ರಜಾಪ್ರಭುತ್ವವನ್ನು ಅತ್ಯುತ್ತಮ ಆಡಳಿತದ ರೂಪವೆಂದು ಸಾರ್ವತ್ರಿಕವಾಗಿ ಒಪ್ಪಿಕೊಳ್ಳಲಾಗಿದೆ. ಈ ಸನ್ನಿವೇಶದಲ್ಲಿ, ನಾವು ಸಂಸದೀಯ ಪ್ರಜಾಪ್ರಭುತ್ವ ಮತ್ತು ಶಾಸಕಾಂಗವನ್ನು ಬಲಪಡಿಸಿದ್ದೇವೆ ಮತ್ತು ಆಡಳಿತದ ವಿವಿಧ ಆಯಾಮಗಳಲ್ಲಿ ಪ್ರಗತಿ ಸಾಧಿಸಿದ್ದೇವೆ.
8 ನಮ್ಮ ಪ್ರಜಾಪ್ರಭುತ್ವ ಯಾವಾಗಲೂ ಜನ ಕೇಂದ್ರಿತವಾಗಿದೆ. ಇದರ ನಿರ್ಮಾತೃಗಳು ಸಂವಿಧಾನವನ್ನು ರೂಪಿಸುವಾಗ ಜನರ ಹಿತಾಸಕ್ತಿಗಳನ್ನು ಮುಖ್ಯಯವಾಗಿ ಗಮನದಲ್ಲಿ ಇಟ್ಟುಕೊಂಡಿದ್ದರು .
9 ಈ ಕಾರಣದಿಂದಲೇ ಇದುವರೆಗೆ ದೇಶದಲ್ಲಿ 17 ಸಾರ್ವತ್ರಿಕ ಚುನಾವಣೆಗಳು ಮತ್ತು 300 ಕ್ಕೂ ಹೆಚ್ಚು ವಿಧಾನಸಭಾ ಚುನಾವಣೆಗಳು ಯಶಸ್ವಿಯಾಗಿ ನಡೆದಿವೆ, ಮತದಾರರ ಭಾಗವಹಿಸುವಿಕೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಚುನಾವಣೆಯ ನಂತರ ಅಧಿಕಾರದ ವರ್ಗಾವಣೆ ಅತೃಯಂತ ಸರಳವಾಗಿ ನಡೆಯುತ್ತಿದೆ. ಇದಕ್ಕೆ ಕಾರಣ ಪ್ರಜಾಪ್ರಭುತ್ವದ ಬಗೆಗಿನ ನಮ್ಮ ಬದ್ಧತೆಯಾಗಿದೆ.
10. ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳು ಜನರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತವೆ. ಶಾಸಕಾಂಗಗಳಲ್ಲಿರುವ ನಾವು ಜನರ ಆಶಯಗಳನ್ನು ಮತ್ತು ಆಕಾಂಕ್ಷೆಗಳನ್ನು ಪೂರೈಸುವ ಮಾಧ್ಯಮವಾಗಿದ್ದು, ಅವುಗಳ ಕಲ್ಯಾಣವನ್ನು ಗುರಿಯಾಗಿಸಿಕೊಂಡು ಕಾನೂನು ರೂಪಿಸುತ್ತೇವೆ.
11. ಆದರೆ ಈಗ ನಾವು ಈ ಪ್ರಯಾಣದ 75 ವರ್ಷಗಳನ್ನು ಪೂರ್ಣಗೊಳಿಸಲಿರುವಾಗ, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಜನರಿಗೆ ಇನ್ನಷ್ಟು ಉತ್ತರದಾಯಕರನ್ನಾಗಿ ಮಾಡುವುದು ಹೇಗೆ ಎಂದು ನಾವು ಪರಿಶೀಲಿಸಬೇಕಾಗಿದೆ. ಆಡಳಿತವು ಜನರ ಭಾವನೆಗಳು ಮತ್ತು ಅಕಾಂಕ್ಷೆಗಳೊಂದಿಗೆ ಹೊಂದಿಕೆಯಾಗಿದೆಯ ಎಂದು ಖಚಿತಪಡಿಸಿಕೊಳ್ಳಲು ಮತ್ತು ಅವರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಮತ್ತಷ್ಟು ಬಲಪಡಿಸುವ ಅವಶ್ಯಕತೆಯಿದೆ .
12. ಸಂಸದೀಯ ಪ್ರಜಾಪ್ರಭುತ್ವವು ಚುನಾಯಿತ ಪ್ರತಿನಿಧಿಗಳ ಜವಾಬ್ದಾರಿಯನ್ನು ಆಧರಿಸಿದೆ. ಚುನಾಯಿತ ಪ್ರತಿನಿಧಿಗಳು ಜನರ ಆಶಯಗಳು ಮತ್ತು ಆಕಾಂಕ್ಷೆಗಳಿಗೆ ಸಂವೇದನಾಶೀಲರಾದಾಗ ಮತ್ತು ಶಾಸಕಾಂಗಗಳ ಮೂಲಕ ಅವುಗಳನ್ನು ಪೂರೈಸಲು ಶ್ರಮಿಸಿದಾಗ ಮಾತ್ರ ಸಂಸತ್ತು ಮತ್ತು ಶಾಸಕಾಂಗದ ಪ್ರತಿಷ್ಠೆಯನ್ನು ಹೆಚ್ಚಿಸಬಹುದು.
13 . ನಮ್ಮ ಶಾಸಕಾಂಗಗಳು ಪ್ರಜಾಪ್ರಭುತ್ವದ ಆತ್ಮ, ದೇಶಕ್ಕಾಗಿ ನೀತಿಗಳು ಮತ್ತು ಕಾನೂನುಗಳನ್ನು ರೂಪಿಸುವ ಜವಾಬ್ದಾರಿ ಶಾಸಕಾಂಗಗಳ ಹೆಗಲ ಮೇಲಿದೆ.
14. ಸಾರ್ವಜನಿಕ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ರಚನಾತ್ಮಕ ಚರ್ಚೆ ಮತ್ತು ಚರ್ಚೆಗಳು: ಶಾಸಕಾಂಗಗಳ ಚೌಕಟ್ಟಿ ನೊಳಗೆ ನಡೆಯುವುದನ್ನು ನಾವು ಖಾತ್ರಿಪಡಿಸಿಕೊಂಡಾಗ ಮಾತ್ರ ನಾವು ಶಾಸಕಾಂಗಗಳನ್ನು ಹೆಚ್ಚು ಜವಾಬ್ದಾರಿಯುತವಾಗಿ ಮಾಡಬಹುದು,
15. ನಮ್ಮ ಶಾಸಕಾಂಗ ಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ಜನರ ಕುಂದುಕೊರತೆಗಳಿಗೆ ಧ್ವನಿ ನೀಡಲು ವಿವಿಧ ದೃಷ್ಟಿ ಕೋನಗಳಲ್ಲಿ ಕೆಲಸ ಮಾಡುತ್ತಿವೆ. ಮತ್ತು ಕಾರ್ಯಾಂಗದ ಜವಾಬ್ದಾರಿಯನ್ನು ಸರಿಪಡಿಸಲು ಕೂಡ ಬಹುವಿಧದ ಆಯಾಮದಲ್ಲಿ ಕೆಲಸ ಮಾಡುತ್ತಿವೆ.
16 ಇಂತಹ ಗುರುತರವಾದ ಜವಾಬ್ದಾರಿಗಳನ್ನು ಪೂರೈಸಲು, ಶಾಸಕಾಂಗದ ಸದಸ್ಯರು ಪ್ರಜಾಪ್ರಭುತ್ವದ ತತ್ವಗಳು ಮತ್ತು ಮೌಲ್ಯಗಳನ್ನು ಶ್ರದ್ಧೆಯಿಂದ ಪಾಲಿಸಬೇಕು ಮತ್ತು ಈ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಜನರಿಗೆ ಹೆಚ್ಚು ಪಾರದರ್ಶಕ ಮತ್ತು ಉತ್ತರದಾಯಕವಾಗಿ ಮಾಡುವಂತ ನೋಡಿಕೊಳ್ಳಬೇಕು.
17 . ಆಡಳಿತದ ಮೂರು ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಅಧಿಕಾರಗಳು ಮತ್ತು ಕರ್ತವ್ಯಗಳನ್ನು ಸಂವಿಧಾನದಲ್ಲಿ ನಿರ್ದಿಷ್ಟಪಡಿಸಲಾಗಿದೆ ಮತ್ತು ಅವುಗಳ ವ್ಯಾಪ್ತಿಯನ್ನು ಕೂಡ ನಿಗದಿಪಡಿಸಲಾಗಿದೆ .
18. ಆದಾಗ್ಯೂ, ಈ ಮೂರರಲ್ಲಿ ಶಾಸಕಾಂಗವು ಪ್ರಮುಖ ಪಾತ್ರವನ್ನು ಹೊಂದಿದ ಏಕಂದರ ಇದು
ಜನರ ನಿರೀಕ್ಷೆಗಳಿಗೆ ಅನುಗುಣವಾಗಿ ಕಾನೂನುಗಳನ್ನು ರೂಪಿಸುವ ಸಂಸ್ಥೆಯಾಗಿದೆ.
19 . ಸಂವಿಧಾನವನ್ನು ರೂಪಿಸುವಾಗ, ನಮ್ಮ ಶಾಸಕರು ನಮ್ಮ ಜನರ ಸಾಮಾಜಿಕ-ಆರ್ಥಿಕ ಪ್ರಗತಿಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಶಾಸಕಾಂಗವು ಹೆಚ್ಚು ಅರಿವು, ಶ್ರದ್ಧೆ, ಪ್ರಾಮಾಣಿಕತ ಮತ್ತು ಜವಾಬ್ದಾರಿಯುತವಾಗಿರಬೇಕು ಎಂಬ ಚಿಂತನೆಯೊಂದಿಗೆ ಇದರ ನಿರ್ಮಾತೃಗಳು ಕೆಲಸ ಮಾಡಿದರು.
Related Articles
Thank you for your comment. It is awaiting moderation.
Comments (0)