ಕೋವಿಡ್ ಗೆ ವೃದ್ಧ ಬಲಿ: ಉಸಿರಾಟದ ತೊಂದರೆ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ

ಬೆಂಗಳೂರು: ಕೋವಿಡ್ ಪಾಸಿಟಿವ್ ಹೊಂದಿದ್ದ ವಯೋವೃದ್ದರಿಬ್ಬರು ರಾಜ್ಯದಲ್ಲಿ ನಿಧನರಾಗಿದ್ದು,ಉಸಿರಾಟದ ತೊಂದರೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸುವಂತೆ ಸರ್ಕಾರ ಸೂಚನೆ ನೀಡಿದೆ‌.

ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್,ರಾಜ್ಯದಲ್ಲಿ 38 ಜನರು ಕೋವಿಡ್ ಪಾಸಿಟಿವ್ ಹೊಂದಿದ್ದು, ಬೆಂಗಳೂರಿನಲ್ಲಿ ವಯೋ ವೃದ್ದರೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಡಯಾಬಿಟಿಸ್ , ಹೃದಯದ ಕಾಯಿಲೆ ಸೇರಿದಂತೆ ಬಹು ಅಂಗಾಂಗಳ ವೈಫಲ್ಯದಿಂದ ಅವರು ಬಳಲುತ್ತಿದ್ದರು. SEPTIC SHOCK WITH MULTI ORGAN SYNDROME ನಿಧನಕ್ಕೆ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. ಅಲ್ಲದೇ ಅವರು ಕೋವಿಡ್ 19 ಸೋಂಕಿಗೆ ತುತ್ತಾಗಿದ್ದರು ಎಂಬುದು ಬೆಳಕಿಗೆ ಬಂದಿದೆ.‌ ಇದೇ ತಿಂಗಳ 13 ರಂದು ಆಸ್ಪತ್ರೆಗೆ ದಾಖಲಾದ ದಿನದಿಂದ ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೇ. 17 ರಂದು ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ.

SARI ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸುವಂತೆ ಸೂಚನೆ ನೀಡಲಾಗಿದ್ದು, ಸರ್ಕಾರ ಅಗತ್ಯ ಮುಂಜಾಗ್ರತ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ. ರಾಜ್ಯದ ಜನರು ಆತಂಕ ಪಡುವ ಅಗತ್ಯವಿಲ್ಲ. ಉಸಿರಾಟದ ಸಮಸ್ಯೆ ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರು ಮುಂಜಾಗ್ರತೆ ವಹಿಸಿ ತಪಾಸಣೆಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ -19 ಟೆಸ್ಟಿಂಗ್ ಗೆ ಅಗತ್ಯ ಟೆಸ್ಟಿಂಗ್ ಕಿಟ್ ಗಳ ಲಭ್ಯತೆಯಿದೆ. SARI ಪ್ರಕರಣಗಳಲ್ಲಿ ಇಂದಿನಿಂದ ಟೆಸ್ಟಿಂಗ್ ನಡೆಸಲು ಸೂಚಿಸಲಾಗಿದೆ. ಸದ್ಯಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ VRDL ಟೆಸ್ಟಿಂಗ್ ಸೌಲಭ್ಯ ಇರುವ ಕೇಂದ್ರಗಳಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ‌ ನಿಮ್ಹಾನ್ಸ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು, NIV ಕೇಂದ್ರ ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ಟೆಸ್ಟಿಂಗ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದು ತಿಂಗಳಿಗಾಗುವಷ್ಟು 5 ಸಾವಿರ RTPCR ಟೆಸ್ಟಿಂಗ್ ಕಿಟ್ ಗಳನ್ನ ತೆಗೆದುಕೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ, ಸೂಕ್ತ ಆರೋಗ್ಯ ಸೇವೆ ಒದಗಿಸಲು ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ.

ಲಭ್ಯವಿರುವ ಟೆಸ್ಟಿಂಗ್ ಕಿಟ್ಸ್ ಗಳ ಮಾಹಿತಿ:

RAT = 2500

RNA extraction kits =130000

VTM= 200000

RTPCR kits = 5000 Procuring.

Related Articles

Comments (0)

Leave a Comment