ಕಿಚ್ಚ ಸುದೀಪ್ ಹೇಳಿಕೆಗೆ ಕಾಲವೇ ಉತ್ತರಿಸುತ್ತೆ: ಡಿಸಿಎಂ ಡಿಕೆ ಶಿವಕುಮಾರ್
- by Suddi Team
- June 21, 2025
- 8 Views

ಬೆಂಗಳೂರು: “ಮೇಕೆದಾಟು ಪಾದಯಾತ್ರೆ ಸಂಬಂಧ ನಟ ಕಿಚ್ಚ ಸುದೀಪ್ ಹೇಳಿಕೆ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಆದರೆ, ಇದಕ್ಕೆಲ್ಲ ಕಾಲವೇ ಉತ್ತರ ನೀಡಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ವಿಚಾರವಾಗಿ ನಮಗೆ ಆಹ್ವಾನ ನೀಡಿಲ್ಲ. ಹೀಗಾಗಿ ನಟ್ಟು ಬೋಲ್ಟ್ ಟೈಟ್ ಮಾಡುತ್ತೇವೆ ಎಂದು ಹೇಳಿರುವುದು ಸರಿಯಲ್ಲ ಎಂದು ನಟ ಸುದೀಪ್ ಹೇಳಿಕೆ ನೀಡಿದ್ದಾರೆ. ಈಗ ನಾನು ಈ ವಿಚಾರವಾಗಿ ಉತ್ತರ ನೀಡುವುದಿಲ್ಲ. ಆದರೆ, ಅಂದು ನಾನು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋಗಿ ಆಹ್ವಾನ ನೀಡಿದ್ದೇನೆ. ಮಾಧ್ಯಮಗಳ ದಾಖಲೆಗಳಲ್ಲಿ ಎಲ್ಲವೂ ಇದೆ. ಇದಕ್ಕೆಲ್ಲ ಕಾಲವೇ ಉತ್ತರ ನೀಡಲಿದೆ ಎಂದರು.
ಮೇಕೆದಾಟು ಪಾದಯಾತ್ರೆ ಕುರಿತು ನಾನು ಅವರು ಯಾರಿಗೂ ಪ್ರತಿಕ್ರಿಯೆ ನೀಡಲು ಹೋಗಲ್ಲ. ಅದರ ಬಗ್ಗೆ ನಾನು ಏನೂ ಬಿಚ್ಚಿಡಲ್ಲ. ಎಲ್ಲವೂ ವಾಣಿಜ್ಯ ಮಂಡಳಿಯಲ್ಲಿದೆ ಹೋಗಿ ನೋಡಲಿ ಎಂದು ಪರೋಕ್ಷವಾಗಿ ಸುದೀಪ್ ಹೇಳಿಕೆಯನ್ನು ವಿರೋಧಿಸಿದರು.
2027ರ ಒಳಗೆ ಕೋಲಾರ ಭಾಗಕ್ಕೆ ಎತ್ತಿನ ಹೊಳೆ ನೀರು:
ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆಗೆ ಸಂಬಂಧಿತ ಸಮಸ್ಯೆಗಳು, ಭೂ ಸ್ವಾಧೀನ ಪ್ರಕ್ರಿಯೆ, ಬೈರಗೊಂಡಲು, ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದ ಭೂ ಸ್ವಾಧೀನ ಹಾಗೂ ಆರ್ಥಿಕ ವಿಚಾರವಾಗಿ ನಾವು ಈಗಾಗಲೇ ಚರ್ಚೆ ಮಾಡಿದ್ದೇವೆ. ಹೀಗಾಗಿ, ಈ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇವೆ ಎಂದು ತಿಳಿಸಿದರು.
ಈ ಯೋಜನೆಯಲ್ಲಿ ಮಾರ್ಪಾಡು ಮಾಡಿರುವ ಅಂಶಗಳು, ಸಚಿವರುಗಳ ಸಲಹೆಗಳನ್ನು ನೀಡಿದ್ದಾರೆ. ಇಲ್ಲಿ ಕೆಲವು ತಾಂತ್ರಿಕ ಅಂಶಗಳೂ ಇವೆ. ಎಲ್ಲವನ್ನು ಅಧ್ಯಯನ ಮಾಡಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುತ್ತೇನೆ. ಬೇರೆ ಯೋಜನೆಗಳು ವಿಳಂಬವಾದರೂ ಚಿಂತೆಯಿಲ್ಲ, ಎತ್ತಿನಹೊಳೆ ಯೋಜನೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸುವಂತೆ ಸಿಎಂ ನನಗೆ ನಿರ್ದೇಶನ ನೀಡಿದ್ದಾರೆ ಎಂದು ಹೇಳಿದರು.
Related Articles
Thank you for your comment. It is awaiting moderation.
Comments (0)