ಯುಮುನೆಯ ತಟದಲ್ಲಿ ಅಟಲ್ ಅಂತ್ಯ ಸಂಸ್ಕಾರ: ಪಂಚಭೂತಗಳಲ್ಲಿ ಲೀನವಾದ ವಾಜಪೇಯಿ

ನವದೆಹಲಿ: ಸಕಲ ಸರಕಾರಿ ಗೌರವದೊಂದಿಗೆ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಬಿಜೆಪಿ ಹಿರಿಯ ನಾಯಕ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯ ಸಂಸ್ಕಾರ ನಡೆಸಲಾಯಿತು.

ಸಂಜೆ 4 ಗಂಟೆಗೆ ರಾಜ್ ಘಾಟ್ ಬಳಿ ಇರುವ ಯುಮುನಾ ತೀರದ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಸಲಾಯಿತು. ಸಕಲ‌ ಸರಕಾರಿ ಗೌರವಗಳೊಂದಿಗೆ ರಾಷ್ಟ್ರಧ್ವಜ ಹೊದಿಸಿ21 ಬಾರಿ ಕುಶಾಲ ತೋಪು ಸಿಡಿಸಿ ಅಂತಿಮ ವಿಧಿ ವಿಧಾನ ಪುಇರತಣಗೊಳಿಸಲಾಯಿತು. ವಾಜಪೇಯಿ ಅವರ ದತ್ತು ಪುತ್ರಿ ನಮಿತಾ ಭಟ್ಟಾಚಾರ್ಯ ಅಟಲ್ ಜಿ ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಮಗಳಾಗಿ ಮಗನ ಜಬಾವ್ದಾರಿ ನಿರ್ವಹಿಸಿದರು. ಯುಮುನೆಯ ತಟದಲ್ಲಿ ಅಟಲ್ ಬಿಹಾರಿ ವಾಜಪೇಯಿ ಪಂಚ ಭೂತಗಳಲ್ಲಿ ಲೀನವಾದರು.

ಅಂತ್ಯ ಸಂಸ್ಕಾರದ ವೇಳೆ ರಾಷ್ಟ್ರಪತಿ ರಾಮನಾಥ ಕೋವಿಂದ್,ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು,ಪ್ರಧಾನಿ ನರೇಂದ್ರ ಮೋದಿ,ಮಾಜಿ ಪ್ರಧಾನಿ ಮನಮೋಹನ್ ಸಿಂಗ್,ಸಾರ್ಕ್ ರಾಷ್ಟ್ರಗಳ ಗಣ್ಯರು,ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ,ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಂತ್ಯ ಸಂಸ್ಕಾರದ ವೇಳೆ ಹಾಜರಿದ್ದು ಅಂತಿಮ ಗೌರವ ಸಲ್ಲಿಕೆ ಮಾಡಿದರು.

ಇದಕ್ಕೂ ಮುನ್ನ ಕೃಷ್ಣ ಮೆನನ್ ರಸ್ತೆಯ ನಿವಾಸದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಾಗು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ‌ ದೇವೇಗೌಡ ಸೇರಿದಂತೆ ವಿವಿಧ ಪಕ್ಷಗಳ ರಾಷ್ಟ್ರೀಯ ನಾಯಕರು ಭೇಟಿ ನೀಡಿ ವಾಜಪೇಯಿ ಅಂತಿಮ ದರ್ಶನ ಮಾಡಿದರು.

ಮಧ್ಯಾಹ್ನ 12 ಗಂಟೆ ವೇಳೆಗೆ ಬಿಜೆಪಿ ಕೇಂದ್ರ ಕಚೇರಿಗೆ ವಾಜಪೇಯಿ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಯಿತು.ಅಲ್ಲಿ ಕೆಲಕಾಲ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ನಂತರ ರಾಷ್ಟ್ರೀಯ ಸ್ಮೃತಿ ಸ್ಥಳಕ್ಕೆ ಮೆರವಣಿಗೆ ಮೂಲಕ ವಾಜಪೇಯಿ ಪಾರ್ಥೀವ ಶರೀರವನ್ನು ಕೊಂಡೊಯ್ಯಲಾಯಿತು.ಪ್ರಧಾನಿ ಮೋದಿ ಹಾಗು ಬಿಜೆಪಿ‌ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೆರವಣಿಗೆ ಜೊತೆಯಲ್ಲಿಯೇ ಸಾಕಿ ನೆಚ್ಚಿನ ಗುರುವಿನ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದರು.

Related Articles

Comments (0)

Leave a Comment