ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ನಾರಾಯಣಗೌಡ

ಮಂಡ್ಯ,ಜೂ-10:ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿ ಸಚಿವ ಡಾ.ನಾರಾಯಣಗೌಡ ಮಾನವೀಯತೆ ಮೆರೆದಿದ್ದಾರೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ
ಮಂಡ್ಯದಿಂದ ಪಾಂಡವಪುರಕ್ಕೆ ತೆರಳುತ್ತಿದ್ದ ವೇಳೆ ಶ್ರೀರಂಗಪಟ್ಟಣ ತಾಲೂಕಿನ ಟಿ ಎಮ್ ಹೊಸೂರು ಬಳಿ ರಸ್ತೆ ಅಪಘಾತದ ಘಟನೆ ತಿಳಿದು ವಾಹನ ನಿಲ್ಲಿಸಿ ವಿಚಾರಿಸಿದ್ದಾರೆ. ತಕ್ಷಣವೆ ತಮ್ಮ ಬೆಂಗಾವಲು ವಾಹನದಲ್ಲಿ ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮಹಿಳೆ ತೀವ್ರ ಗಾಯಗೊಂಡಿದ್ದು.ಸಚಿವರು ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ತೋರಿದ್ದಾರೆ.

Related Articles

Comments (0)

Leave a Comment