ರೈಲಿಗೆ ತಲೆಕೊಟ್ಟು ಬಾಳೆಹಣ್ಣು ವ್ಯಾಪಾರಿ ಆತ್ಮಹತ್ಯೆ

ಬೆಂಗಳೂರು: ಸೂರ್ಯಗ್ರಹಣ ಮುಗಿದ ನಂತರದಲ್ಲಿ

ವ್ಯಕ್ತಿಯೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಲಹಂಕದಲ್ಲಿ ನಡೆಸಿದೆ.

ರೈಲು ಹಳಿಗಳ ಮೇಲೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬಾಳೆಹಣ್ಣು ವ್ಯಾಪಾರಿಯಾಗಿದ್ದರು ಯಲಹಂಕದ ಎನ್.ಇ.ಎಸ್.ರಸ್ತೆಯಲ್ಲಿ ಬಾಳೆಹಣ್ಣು ಮಾರುತ್ತಿದ್ದರು ಎನ್ನಲಾಗಿದೆ.

ಕುಟುಂಬ ಕಲಹದಿಂದ ಬೇಸತ್ತು ಮಧ್ಯ ರಾತ್ರಿ ಕುಡಿದ ಮತ್ತಿನಲ್ಲಿ ರೈಲ್ವೆ ಹಳಿಗಳ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಯಲಹಂಕ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ.

Related Articles

Comments (0)

Leave a Comment