ಬೈಕ್ ವ್ಹೀಲಿಂಗ್ ಮಾಡಲು ಹೋಗಿ ಅಪಘಾತ: ಮೂವರ ಸಾವು
- by Suddi Team
- June 21, 2020
- 12 Views

ಬೆಂಗಳೂರು: ಸೂರ್ಯ ಗ್ರಹಣದ ದಿನದಂದೇ ವ್ಹೀಲಿಂಗ್ ಮಾಡಲು ಹೋಗಿದ್ದ ಮೂವರು ಅಪಘಾತದಿಂದ ಧಾರುಣವಾಗಿ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ಜರುಗಿದೆ.
ಯಲಹಂಕದ ಜಿಕೆವಿಕೆ ಬಳಿ ಭೀಕರ ಅಪಘಾತ ಸಂಭವಿಸಿದ್ದು ಮೂವರು ಸಾವಿಗೀಡಾಗಿದ್ದಾರೆ. ಬೆಳಿಗ್ಗೆ 6.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ವ್ಹೀಲಿಂಗ್ ಮಾಡುತ್ತಿದ್ದ ಯುವಕರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ನಾಗವಾರ ಗೋವಿಂದಪುರದ ಮಹ್ಮದ್ ಹದಿ, ಅಹಮದ್ ಖಾನ್ ಹಾಗೂ ಸೈಯದ್ ರಿಯಾಜ್ ಮೃತ ಯುವಕರು ಎನ್ನಲಾಗಿದೆ.
ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Related Articles
Thank you for your comment. It is awaiting moderation.
Comments (0)