ಡಿಕೆ ಶಿವಕುಮಾರ್ ಗೆ ಸಿಬಿಐ ಶಾಕ್; ಏಕಕಾಲಕ್ಕೆ 14 ಕಡೆ ದಾಳಿ

ಬೆಂಗಳೂರು: ಉಪ ಚುನಾವಣೆ ಘೋಷಣೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸಿಬಿಐ ಶಾಕ್ ನೀಡಿದ್ದು ಡಿಕೆ ಶಿವಕುಮಾರ್ ಸಹೋದರಿ ಸೇರಿದ 14 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದೆ.

ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಬೆಂಗಳೂರು ಗ್ರಾಮಾಂತರ ಸಂಸತ್ ಸದಸ್ಯ ಡಿ.ಡಿ ಸುರೇಶ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ ಮಾಡಿಕೊಂಡು ಸೋಲಾರ್ ಪ್ರಾಜೆಕ್ಟ್ ನಲ್ಲಿ ಕಿಕ್ ಬ್ಯಾಕ್ ಪಡೆದುಕೊಂಡ ಆರೋಪದ ಮೇಲೆ ಈ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ.

ಈ ಹಿಂದೆ ಸಿಬಿಐ ತನಖೆ ಪ್ರಶ್ನಿಸಿದ್ದ ಡಿಕೆ ಶಿವಕುಮಾರ್ ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್ ತನಿಖೆಗೆ ಅನುಮತಿ ನೀಡಿತ್ತು.

ಉಪ ಚುನಾವಣಾ ಸಮಯದಲ್ಲೇ ದಾಳಿ ನಡೆಸಿರುವುದಕ್ಕೆ ವಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ, ಅಧಿಕಾರ ದುರ್ಬಳಕೆ ಮಾಡಿಕೊಂಡು ಸಿಬಿಐ ದಾಳಿ ನಡೆಸಲಾಗಿದೆ ಎಂದು ಬಿಜೆಪಿ ವಿರುದ್ಧ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ.

Related Articles

Comments (0)

Leave a Comment