ಸಾವಿರಾರು ಕೋಟಿ ಅವ್ಯವಹಾರ ಪ್ರಕರಣ ತನಿಖೆಗೆ ಹೆದರಿ ಆತ್ಮಹತ್ಯೆಗೆ ಶರಣಾದ್ರಾ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಸಿಇಓ..?
- by Suddi Team
- July 6, 2020
- 14 Views

ಬೆಂಗಳೂರು: ಠೇವಣಿದಾರರಿಗೆ ಕೋಟಿ ಕೋಟಿ ವಂಚಿಸಿದ್ದ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಸಿಇಓ ವಾಸುದೇವ್ ಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೇಲ್ನೋಟಕ್ಕೆ ತನಿಖೆಗೆ ಹೆದರಿ ಆತ್ನಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಬಸವನಗುಡಿಯ ಶ್ರೀ ಗುರು ರಾಘವೇದ್ರ ಕೋ ಆಪರೇಟಿವ್ ಸಹಕಾರ ಬ್ಯಾಂಕಿನಲ್ಲಿ ಸಾವಿರಾರು ಕೋಟಿ ರೂ ಅವ್ಯವಹಾರ ನಡೆದಿದ್ದು, ಅವ್ಯಹಾರ ಪ್ರಕರಣದ ತನಿಖೆಯ ಹೊಣೆಯನ್ನ ಎಸಿಬಿಯಿಂದ ಸಿಐಡಿಗೆ ವಹಿಸಲಾಗಿದೆ.
ಬ್ಯಾಂಕಿನಲ್ಲಿ ಕೋಟ್ಯಂತರ ರೂಪಾಯಿ ಅವ್ಯಹಾರ ನಡೆದಿರುವ ಬಗ್ಗೆ ಇತ್ತೀಚೆಗೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು. ಹಾಗೆ ಪ್ರಕರಣದ ತನಿಖೆಯನ್ನ ಸಿಐಡಿ ನಡೆಸೋದು ಒಳ್ಳೆಯದು ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿತ್ತು. ಪ್ರಕರಣದ ಜವಾಬ್ದಾರಿಯನ್ನ ಸಿಐಡಿ ತೆಗೆದುಕೊಂಡು ತನಿಖೆ ನಡೆಸುತಿತ್ತು. ಬ್ಯಾಂಕ್ ವಿರುದ್ಧ ಆರೋಪ ಕೇಳಿ ಬಂದಾಗ ಎಸಿಬಿ ಪಿಎಂಎಲ್ ಅಡಿ ಪ್ರಕರಣ ದಾಖಲಾಗಿತ್ತು.
ಬಸವನಗುಡಿ ಶಾಖೆಯ ಹಿಂದಿನ ಅಧ್ಯಕ್ಷ ರಾಮಕೃಷ್ಣ, ಸಿಇಒ ವಾಸುದೇವ ಮಯ್ಯ ಅವರ ಮನೆಗಳು ಸೇರಿದಂತೆ ಐದು ಕಡೆ ಎಸಿಬಿ ದಾಳಿ ನಡೆಸಿತ್ತು. ಬ್ಯಾಂಕಿನಲ್ಲಿ ಅಗತ್ಯ ಭದ್ರತೆ ಕೈಗೊಳ್ಳದೇ 27 ಮಂದಿಗೆ 921ಕೋಟಿ ಸಾಲ ನೀಡಿರುವ ಮಾಹಿತಿ ಆರ್ ಬಿ ಐ ಮತ್ತು ಎಸಿಬಿ ತನಿಖೆಯಿಂದ ಬಯಲಾಗಿತ್ತು. ಬ್ಯಾಂಕ್ಗೆ ಸಂಬಂಧ ಪಟ್ಟ ಅಧಿಕಾರಿಗಳ ಮನೆಯಲ್ಲಿ ಅಕ್ರಮ ಆಸ್ತಿ ಕೂಡ ಪತ್ತೆಯಾಗಿತ್ತು . ಸದ್ಯ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪರಿಶೀಲನೆ ನಡೆಯುತ್ತಿದೆ.
Related Articles
Thank you for your comment. It is awaiting moderation.
Comments (0)