ಹೃದಯಾಘಾತದಿಂದ ಉಪ ಮೇಯರ್ ರಮಿಳಾ ಉಮಾಶಂಕರ್ ನಿಧನ!
- by Suddi Team
- October 5, 2018
- 108 Views

ಬೆಂಗಳೂರು: ಬಿಬಿಎಂಪಿಯ ಉಪಮೇಯರ್ ಆಗಿ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದ ರಮಿಳಾ ಉಮಾಶಂಕರ್ ಅವರು ತೀವ್ರ ಹೃದಯಾಘಾತದಿಂದ ಗುರುವಾರ ತಡರಾತ್ರಿ ನಿಧನಹೊಂದಿದ್ದಾರೆ.
ಗುರುವಾರ ರಾತ್ರಿ 12.50ರಲ್ಲಿ ರಮಿಳಾ ಅವರಿಗೆ ತೀವ್ರ ಎದೆನೋವು ಕಾಣಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ನಗರದ ಪಶ್ಚಿಮ ಕಾರ್ಡ್ ರಸ್ತೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
2015ರಲ್ಲಿ ನಡೆದಿದ್ದ ಬಿಬಿಎಂಪಿ ಚುನಾವಣೆಯಲ್ಲಿ ಕಾವೇರಿಪುರ ವಾರ್ಡ್ನಿಂದ (103) ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಮಿಳಾ ಅವರು ಜಯ ಸಾಧಿಸಿದ್ದರು. ವಾರದ ಹಿಂದಷ್ಟೇ ಬಿಬಿಎಂಪಿಯ ಉಪ ಮೇಯರ್ ಆಗಿ ಅವರು ಆಯ್ಕೆಯಾಗಿದ್ದರು.
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಗುರುವಾರ ಬೆಳಗ್ಗೆ ನಮ್ಮ ಮೆಟ್ರೋಗೆ ಭೇಟಿ ನೀಡಿದಾಗ, ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ಬೆಳ್ಳಂಬೆಳಗ್ಗೆ ನಗರದ ಮಾರುಕಟ್ಟೆಗಳ ಪರಿಶೀಲನೆಯಲ್ಲಿ ತೊಡಗಿದ್ದಾಗ ರಮಿಳಾ ಅವರೂ ಭಾಗವಹಿಸಿದ್ದರು. ಹೀಗೆ ದಿನವಿಡೀ ಲವಲವಿಕೆಯಿಂದಲೇ ಇದ್ದ ರಮಿಳಾ ಅವರು ಶುಕ್ರವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Related Articles
Thank you for your comment. It is awaiting moderation.
Comments (0)