ಮಾಜಿ ಸಚಿವ ಈಶ್ವರ ಖಂಡ್ರೆ ವಿರುದ್ಧ ಚುನಾವಣಾ ತಕರಾರು ಅರ್ಜಿ ಸಲ್ಲಿಕೆ
- by Suddi Team
 - June 28, 2018
 - 83 Views
 
ಫೋಟೋ ಕೃಪೆ:ಟ್ವಿಟ್ಟರ್
ಕಲಬುರಗಿ:ಮಾಜಿ ಸಚಿವ ಹಾಲಿ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ಡಿ.ಕೆ ಸಿದ್ರಾಮ ಕಲಬುರಗಿ ಹೈ ಕೋರ್ಟ್ ನಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಮಾಜಿ ಸಚಿವ ಈಶ್ವರ ಖಂಡ್ರೆ ಚುನಾವಣೆಯಲ್ಲಿ ಅಕ್ರಮ ಎಸಗಿ ಗೆಲವು ಸಾಧಿಸಿದ್ದಾರೆ ಎಂದು ಆರೋಪ ಮಾಡಿರುವ ಅರ್ಜಿದಾರರು ಈಶ್ವರ ಖಂಡ್ರೆ ವಿರುದ್ಧ 1951 ರ ಪ್ರಜಾ ಪ್ರತಿನಿಧಿ ಕಾಯ್ದೆ ಅಡಿ ಕ್ರಮ ಕೈ ಗೊಳ್ಳುಲು ಮನವಿ ಮಾಡಿದ್ದಾರೆ.
ಆರು ನೂರು ಪುಟಗಳ ತಕರಾರು ಅರ್ಜಿಯನ್ನು ಹೈ ಕೋರ್ಟ್ ನಲ್ಲಿ ಸಲ್ಲಿಕೆ ಮಾಡಿದ್ದು ಚುನಾವಣೆಯ ಅಫಿಡವಿಟ್ ಪ್ರತಿ ಜೊತೆಗೆ ಹಣ ಹಂಚಿಕೆ ಸೇರಿ ಹಲವು ಅಕ್ರಮ ಎಸಗಿದ್ದಾರೆ,ಚುನಾವಣೆ ವೇಳೆ ಸಚಿವರಾಗಿ ಅಧಿಕಾರದಲ್ಲಿ ಇದ್ದ ಹಿನ್ನಲೆಯಲ್ಲಿ ಅಕ್ರಮ ಎಸಗಿ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎನ್ನುವ ಆರೋಪಗಳನ್ನು ಅರ್ಜಿದಾರರು ಮಾಡಿದ್ದಾರೆ.
Related Articles
                            Thank you for your comment. It is awaiting moderation.
                        
                                        
                    
                    
                
                            
                                            
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
Comments (0)