ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ನಿಧನ!

ಹೈದರಾಬಾದ್: ತೆಲುಗಿನ ಅರುಂಧತಿ, ದೇವಿ ಪುತ್ರುಡು ಚಿತ್ರಗಳ ನಿರ್ದೇಶಕ ಕೋಡಿ ರಾಮಕೃಷ್ಣ ಹೈದ್ರಾಬಾದ್ ನ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ‌.

ಕನ್ನಡದ ನಾಗರಹಾವು ಸೇರಿದಂತೆ ನೂರಾರು ಚಿತ್ರಗಳನ್ನ ನಿರ್ದೇಶನ ಮಾಡಿದ್ದ ಕೋಡಿ ರಾಮಕೃಷ್ಣ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಹೈದ್ರಾಬಾದ್ ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ.

ಕೋಡಿ ರಾಮಕೃಷ್ಣ ಕೊನೆಯದಾಗಿ ಕನ್ನಡದ ನಾಗರಹಾವು ಚಿತ್ರವನ್ನ ನಿರ್ದೇಶನ ಮಾಡಿದ್ದರು.

Related Articles

Comments (0)

Leave a Comment