ಗೌರಿ ಹತ್ಯೆ ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ!
- by Suddi Team
- June 27, 2018
- 53 Views
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರು ಮಂದಿ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ನಗರದ 3ನೇ ಎಸಿಎಂಎಂ ನ್ಯಾಯಾಲಯ14 ದಿನಗಳ ಕಾಲ ವಿಸ್ತರಿಸಿದೆ.
ಆರೋಪಿಗಳಾದ ಅಮೋಲ್ ಕಾಳೆ, ಪರಶುರಾಮ್ ವಾಗ್ಮೋರೆ, ಕೆ.ಟಿ.ನವೀನ್ ಕುಮಾರ್, ಪ್ರವೀಣ್ , ಅಮಿತ್, ಮನೋಹರ್ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಜುಲೈ14 ರವರೆಗೆ ವಿಸ್ತರಿಸಿದೆ.
ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದಲೇ ವಿಡಿಯೊ ಕಾನ್ಫರೆನ್ಸ್ ಮೂಲಕ ನಗರದ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
Related Articles
Thank you for your comment. It is awaiting moderation.
Comments (0)