ಆಕಸ್ಮಿಕವಾಗಿ ಮೃತಪಟ್ಟ ಕುಟುಂಬದವರಿಗೆ ಪರಿಹಾರ

ಬೆಂಗಳೂರು – 19:ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ಹಾಗೂ ನಾಗಮಂಗಲ ತಾಲೂಕಿನಲ್ಲಿ ಪ್ರತ್ಯೇಕ ಘಟನೆಯಲ್ಲಿ ಏಳು ಜನ ಮೃತಪಟ್ಟಿದ್ದರು. ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಡಾ| ನಾರಾಯಣಗೌಡ ಅವರು ಸಿಎಂ ಯಡಿಯೂರಪ್ಪ ಜೊತೆ ಚರ್ಚಿಸಿ, ಪರಿಹಾರ ಹಣ ಮಂಜೂರು ಮಾಡಿಸಿದ್ದಾರೆ.

ನಾಗಮಂಗಲ ತಾಲೂಕಿನ ಬೀರನಹಳ್ಳಿಯ ಒಂದೇ ಕುಟುಂಬದ ಗೀತಾ, ಸವಿತ, ಸೌಮ್ಯ ಮೃತಪಟ್ಟಿದ್ದು, ಮೃತರ ಕುಟುಂಬದವರಿಗೆ 5 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಆಕಸ್ಮಿಕವಾಗಿ ಮೃತಪಟ್ಟಿರುವ ನಾಗಮಂಗಲದ ಚೋಳಸಂದ್ರ ಗ್ರಾಮದ ರಶ್ಮಿ ಹಾಗೂ ಇಂಚರ ಮೃತಪಟ್ಟಿದ್ದು ಎರಡೂ ಕುಟುಂಬದವರಿಗೆ ತಲಾ 2 ಲಕ್ಷ ರೂ ಹಾಗೂ ಕೆ.ಆರ್. ಪೇಟೆ ತಾಲೂಕಿನ ಹುಳಿಗಂಗನಹಳ್ಳಿಯ ಅಭಿಷೇಕ್ ಆಕಸ್ಮಿಕವಾಗಿ ಮೃತಪಟ್ಟಿದ್ದು, ಕುಟುಂಬದವರಿಗೆ 2 ಲಕ್ಷ ರೂ. ಮತ್ತು ಕೆ.ಆರ್.ಪೇಟೆ ಆದಿಹಳ್ಳಿ ಗ್ರಾಮದ ಕುಮಾರ್ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ.

Related Articles

Comments (0)

Leave a Comment