ಮಾಜಿ ಸಚಿವ ಎಂಪಿ ಪ್ರಕಾಶ್ ಪುತ್ರ ಎಂ ಪಿ ರವೀಂದ್ರ ಇನ್ನಿಲ್ಲ
- by Suddi Team
- November 3, 2018
- 47 Views

ಬೆಂಗಳೂರು:ಕಳೆದ ಹಲವು ದಿನಗಳಿಂದ ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಎಂ ಪಿ ರವೀಂದ್ರ ನಿಧನರಾಗಿದ್ದಾರೆ.ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಎಂ ಪಿ ರವೀಂದ್ರ(೪೯)ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ೩.೪೫ ಕೊನೆಯುಸಿರು
ಹರಪನಹಳ್ಳಿ ಕ್ಷೇತ್ರದ ಮಾಜಿ ಶಾಸಕ, ಬಳ್ಳಾರಿ ಕಾಂಗ್ರೆಸ್ ನ ಆಧ್ಯಕ್ಷರಾಗಿಯೂ ಕೆಲಸ ಮಾಡಿದ್ದ ಅವರು,
೨೦೧೩ ರ ರಲ್ಲಿ ಹರಪನ ಹಳ್ಳಯಿಂದ ಸ್ಪರ್ಧಿಸಿ ಗೆದ್ದಿದ್ದರು.ಆದರೆ ೨೦೧೮ ರ ವಿಧಾನಸಭೆ ಚುನಾವಾಣೆಗೆ ಒಲ್ಲದ ಮನಸ್ಸಿನಿಂದ ಸ್ಪರ್ಧಿಸಿ ಸೋತಿದ್ದರು.
ಎಂ ಪಿ ರವೀಂದ್ರ ನಿಧನಕ್ಕೆ ಕೈ ಮುಖಂಡರು ಕಂಬನಿ ಮಿಡಿದಿದ್ದಾರೆ.ವಿಕ್ರಂ ಆಸ್ಪತ್ರೆಗೆ ತೆರಳಿದ ಮಾಜಿ ಸಿ ಎಂ ಸಿದ್ರಾಮಯ್ಯ, ಜಮೀರ್ ಅಹ್ಮದ್
ಎಂ ಪಿ ಪ್ರಕಾಶ್ ಪುತ್ರ ರವೀಂದ್ರ ಪಾರ್ಥಿವ ಶರೀರದ ದರ್ಶನ ಪಡೆದುಕೊಂಡ ಬಂದರು.
ಬೆಂಗಳೂರಿನ ಗಾಂಧಿಭವನ ಹತ್ತಿರದ ವಲ್ಲಭ ನಿಕೇತನದಲ್ಲಿ 3/11/2018 ರ ಬೆಳಗ್ಗೆ 9.00 ಗಂಟೆಯಿಂದ ಬೆಳಗ್ಗೆ 10.30 ರವರೆಗೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿರುತ್ತದೆ.
ನಂತರ ರಸ್ತೆ ಮುಖಾಂತರ ಹರಪನಹಳ್ಳಿಗೆ ತೆರಳಿ ಮಧ್ಯಾಹ್ನ 3.00 ಗಂಟೆಯಿಂದ 6.00 ಗಂಟೆಯವರೆಗೆ ಸ್ಥಳೀಯ ಎ.ಡಿ.ಬಿ ಕಾಲೇಜು ಮೈದಾನದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿರುತ್ತದೆ.
ನಂತರ ಸ್ವಗ್ರಾಮ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಗೆ ತೆರಳಿ ದಿನಾಂಕ 4/11/2018 ರ ಬೆಳಗ್ಗೆ 11.00 ಗಂಟೆಯವರೆಗೆ ಜಿ.ಬಿ.ಆರ್. ಕಾಲೇಜು ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, ನಂತರ ಅಪರಾಹ್ನ 12.00 ಗಂಟೆಗೆ ದಿ.ಎಂ.ಪಿ.ಪ್ರಕಾಶ್ ರವರ ಸಮಾಧಿ ಹತ್ತಿರ ಅಂತಿಮ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಶ್ರೀಮತಿ ರುದ್ರಾಂಬ ಎಂ.ಪಿ.ಪ್ರಕಾಶ್ ಮತ್ತು ಕುಟುಂಬ ವರ್ಗ ಮಾಹಿತಿ ನೀಡಿದೆ.
Related Articles
Thank you for your comment. It is awaiting moderation.
Comments (0)