ದೇವಸ್ಥಾನದ ಧರ್ಮದರ್ಶಿ ಅಡ್ಡಗಟ್ಟಿ ದರೋಡೆ!
- by Suddi Team
- June 10, 2018
- 33 Views
ತುಮಕೂರು: ಕುಣಿಗಲ್ನ ಬಿದನಗೆರೆಯಲ್ಲಿ ಶನಿಮಹಾತ್ಮ ದೇವಾಲಯದ ಧರ್ಮದರ್ಶಿಯನ್ನು ಅಡ್ಡಗಟ್ಟಿದ ದರೋಡೆಕೋರರು 20 ಲಕ್ಷ ರೂಪಾಯಿ ಮತ್ತು ಕಾರನ್ನು ದರೋಡೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಕಾರಿನಲ್ಲಿ ತೆರಳುತ್ತಿದ್ದ ಧನಂಜಯ ಸ್ವಾಮೀಜಿಯನ್ನು ಅಡ್ಡಗಟ್ಟಿದ 6 ಮಂದಿ ದರೋಡೆಕೋರರು ಕಣ್ಣಿಗೆ ರಾಸಾಯನಿಕ ಸಿಂಪಡಿಸಿ 20 ಲಕ್ಷ ರೂಪಾಯಿ ಹಣ ಮತ್ತು ಕಾರನ್ನು ಎಗರಿಸಿ ಪರಾರಿಯಾಗಿದ್ದಾರೆ.
ಧನಂಜಯ ಸ್ವಾಮೀಜಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Related Articles
Thank you for your comment. It is awaiting moderation.
Comments (0)