- ಇತರೆ
- ಮುಖ್ಯ ಮಾಹಿತಿ
- ರಾಜ್ಯ
- ಸಾಮಾಜಿಕ
- Like this post: 0
ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿ ಕಳಪೆಯಿಂದ ಕೂಡಿದೆ: ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ
- by Suddi Team
- June 27, 2020
- 14 Views

ರಾಯಚೂರು: ದೇವದುರ್ಗ ತಾಲೂಕಿನಲ್ಲಿ ಭರದಿಂದ ಸಾಗಿರುವ ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿ ಕಳಪೆಯಿಂದ ಕೂಡಿದೆ ಅಂತ ಆರೋಪಿಸಿ ಜಿಲ್ಲಾ ಜೆಡಿಎಸ್ ನಿರಂತರ ಪ್ರತಿಭಟನೆ ನಡೆಸುತ್ತಿದೆ. ದೇವದುರ್ಗದ ಕೊತ್ತದೊಡ್ಡಿಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೂಡಲೇ ಕಾಮಗಾರಿ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
ಜಲಾಶಯದಿಂದ 95 ಕಿಮೀ ವರೆಗಿನ ಕಾಮಗಾರಿಗೆ 956 ಕೋಟಿ ವೆಚ್ಚದಲ್ಲಿ ಆಧುನೀಕರಣ ಮಾಡಲಾಗುತ್ತಿದ್ದು ಒಂದೇ ಕಂಪನಿಗೆ ಇಡೀ ಕಾಮಗಾರಿ ಗುತ್ತಿಗೆ ನೀಡಲಾಗಿದೆ. ಮಾಜಿ ಪ್ರಧಾನಿ ದೇವೇಗೌಡರ ಅವಧಿಯಲ್ಲಿ ಕಾಲುವೆ ನಿರ್ಮಾಣವಾಗಿತ್ತು. ಆದ್ರೆ, ಈಗ ಆಧುನೀಕರಣ ಹೆಸರಿನಲ್ಲಿ ಕಳಪೆ ಕಾಮಗಾರಿ ನಡೆದಿದೆ ಅಂತ ಜೆಡಿಎಸ್ ಮುಖಂಡರು ಆರೋಪಿಸಿದ್ದಾರೆ.
ಲಕ್ಷ್ಮಣ ಸವದಿಯವರನ್ನ ಜಿಲ್ಲಾ ಉಸ್ತುವಾರಿಯಾಗಿ ಮಾಡಿರುವುದು ನಮ್ಮ ದುರಾದೃಷ್ಟ. ಜಿಲ್ಲೆಗೆ ಕೇವಲ ಪರ್ಸೆಂಜೇಟ್ಗಾಗಿ ಬಂದು ಹೋಗ್ತಾರೆ. ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಳಪೆಯಾಗುತ್ತಿದ್ದರೂ ಸರ್ಕಾರ ಸುಮ್ಮನೆ ಕುಳಿತಿದೆ ಅಂತ ಜೆಡಿಎಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Related Articles
Thank you for your comment. It is awaiting moderation.
Comments (0)