ಮೇಕೆದಾಟು ಯೋಜನೆಗೆ ತಮಿಳುನಾಡು,ಕೇಂದ್ರ ಸರ್ಕಾರದ ತಕರಾರು ಸಲ್ಲದು; ಸಿಎಂ ಸಿದ್ದರಾಮಯ್ಯ
- September 13, 2025
- 0 Likes
ಮಂಗಳೂರು: ರಾಜ್ಯ ಮತ್ತು ರಾಷ್ಟ್ರದ ಗೌರವವನ್ನು ಏಷ್ಯನ್ ಕ್ರೀಡಾಕೂಟದಲ್ಲಿ ಎತ್ತಿ ಹಿಡಿದ ರಾಜ್ಯದ ಪ್ರತಿಭೆ ಪೂವಮ್ಮ ಅವರಿಗೆ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಅವರು ಇಂದು ಸನ್ಮಾನಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಯೋಜಿಸಿದ್ದ ಸಭೆಯ ಆರಂಭದಲ್ಲಿ ಸಾಧಕಿ ಪೂವಮ್ಮ ಅವರು ಚಿನ್ನದ ಪದಕ ಪಡೆದುದಕ್ಕೆ 25 ಲಕ್ಷ ರೂಪಾಯಿ ಹಾಗೂ ಬೆಳ್ಳಿ ಪದಕ ಪಡೆದುದಕ್ಕೆ 15 ಲಕ್ಷ ರೂಪಾಯಿ ಒಟ್ಟು 40 ಲಕ್ಷ ರೂಪಾಯಿಗಳ ಚೆಕ್ ಜೊತೆಗೆ ನಿವೇಶನದ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು.
ಇಂದು ಬೆಳಗ್ಗೆ ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಿದ ವೇಳೆ ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕ್ರೀಡಾಳುವಿಗೆ ಗೌರವ ನೀಡುವ ಬಗ್ಗೆ ನಿರ್ಧರಿಸಲಾಯಿತು. ಈ ಅಭಿನಂದನೆ ರಾಜ್ಯದ ಸಾಧಕರಿಗೆ ಸ್ಪೂರ್ತಿಯಾಗಲಿ ಎಂದ ಮುಖ್ಯಮಂತ್ರಿಗಳು, ಕ್ರೀಡಾ ಸಾಧಕರಿಗೆ ಇನ್ನಷ್ಟು ಪ್ರೋತ್ಸಾಹ ನೀಡಲು ಸರ್ಕಾರ ಬದ್ಧವಾಗಿದೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪೂವಮ್ಮ ಅವರು, ಇಷ್ಟು ತುರ್ತು ಸಮಯದಲ್ಲಿ ತನ್ನ ಸಾಧನೆಗೆ ನೀಡಿದ ಗೌರವಕ್ಕೆ ತಾನು ಅನಂತಾನಂತ ಧನ್ಯವಾದಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಜಯಮಾಲಾ ಅವರು ಶುಭಹಾರೈಸಿದರು. ಸಂಸದ ನಳಿನ್ ಕುಮಾರ್ ಕಟೀಲ್, ಎಂಎಲ್ಸಿ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಜನಪ್ರತಿನಿಧಿಗಳು, ಅಧಿಕಾರಿಗಳಿದ್ದರು ಭಾಗಿಯಾಗಿದ್ದರು.
Comments (0)