- ಬೆಂಗಳೂರು
- ಮುಖ್ಯ ಮಾಹಿತಿ
- ರಾಜಕೀಯ
- ರಾಜ್ಯ
- Like this post: 0
ಮತ್ತೆ ಹಾಸನ ಜಿಲ್ಲಾಧಿಕಾರಿಯಾದ ರೋಹಿಣಿ ಸಿಂಧೂರಿ!
- by Suddi Team
- June 25, 2018
- 196 Views
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ನೇಮಿಸಿ ಸರ್ಕಾರ ಇಂದು ಆದೇಶ ಹೊರಡಿಸಿದ್ದು, ಈ ಆದೇಶವು ತಕ್ಷಣದಿಂದಲೇ ಜಾರಿಯಾಗಲಿದೆ ಎಂದು ನ್ಯಾಯಾಲಯಕ್ಕೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಮಾಹಿತಿ ನೀಡಿದರು.
ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅವಧಿ ಪೂರ್ವವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸರ್ಕಾರದ ಆದೇಶ ಪ್ರಶ್ನಿಸಿ ರೋಹಿಣಿ ಸಿಂಧೂರಿ ನ್ಯಾಯಾಲಯದ ಮೆಟ್ಟಿಲೇರಿದ್ದು ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ಕೋರಿದ್ದರು.
ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರೆಸಲು ಒಪ್ಪಿ ಸಮ್ಮಿಶ್ರ ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.
Related Articles
Thank you for your comment. It is awaiting moderation.


Comments (0)