ಗ್ರಾಮ ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಕ,ಎಸ್ಎಸ್ಎಲ್ಸಿ ಪರೀಕ್ಷೆ ರದ್ದಿಲ್ಲ: ಸಂಪುಟದ ಮಹತ್ವದ ನಿರ್ಧಾರ…!

ಬೆಂಗಳೂರು:ಗ್ರಾಮ ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಕ,ಏಳನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು ಹಾಗು ನಿಗದಿತ ದಿನಾಂಕದಂದೇ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬೇಕು ಎನ್ನುವ ಮಹತ್ವದ ನಿರ್ಧಾರಗಳನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.31 ವಿಷಯಗಳ ಮೇಲೆ ಮಹತ್ವದ ಚರ್ಚೆ ನಡೆಸಿ ಹಕವು ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಸಂಪುಟ ಸಭೆ ನಂತರ ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ,ಗ್ರಾಮ ಪಂಚಾಯತಿ ಚುನಾವಣೆಯನ್ನು ಆದಷ್ಟು ಬೇಗ ನಡೆಸಲು ನಿರ್ಧಾರಿಸಿದ್ದು ಅಲ್ಲಿಯವರೆಗೂ ಆಡಳಿತ ಸಮಿತಿ ಹಾಗು ಆಡಳಿತಾಧಿಕಾರಿ ನೇಮಕಕ್ಕೆ ಚರ್ಚೆ ನಡೆಸಿ ಅಂತಿಮವಾಗಿ ಆಡಳಿತಾಧಿಕಾರಿ ನೇಮಕ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ, ಎಲ್ಲಾ ಗ್ರಾಮಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಿಸಲು ಮಹತ್ವದ ನಿರ್ಧಾರ ಕೈಗೊಂಡಿದ್ದು, ಆರು ತಿಂಗಳೋಳಗೆ ಚುನಾವಣೆಯಾಗಲಿದೆ ಎರಡು ಮೂರು ತಿಂಗಳಿನಲ್ಲಿ ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದರು.

ಆನ್ ಲೈನ್ ಶಿಕ್ಷಣದ ಕುರಿತು ಸಂಪುಟದಲ್ಲಿ ಮಹತ್ವದ ಚರ್ಚೆ ನಡೆಯಿತು.ಐದನೇತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು ನೀತಿಯನ್ನು ಏಳನೇತರಗತಿವರೆಗೆ ವಿಸ್ತರಿಸಲು ನಿರ್ಧರಿಸಿತು ಜೊತೆಗೆ ಈಗಾಗಲೇ ನಿಗದಿಯಾದ ದಿನಾಂಕದಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗುತ್ತದೆ ಎಂದರು.

Related Articles

Comments (0)

Leave a Comment